ವನಮಹೋತ್ಸವ ಕಾರ್ಯಕ್ರಮ ಆಚರಣೆ
ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಜೈನ ಜೆಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಗಿಡಗಳನ್ನು ನೆಡುವುದರ ಮುಖೇನ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಲಯನ್ ವಲಯಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ ಶೆಟ್ಟಿ,ಕಾರ್ಯದರ್ಶಿ ಅಶೋಕ ವಿ ಆಚಾರ್ಯ,ಕೋಶಾಧಿಕಾರಿ ರಮೇಶ್ ಮೊಗವೀರ,ಮಾಜಿ ಅಧ್ಯಕ್ಷ ನರಸಿಂಹ ದೇವಾಡಿಗ,ಉಪಾಧ್ಯಕ್ಷ ಸಮರ ಶೆಟ್ಟಿ,ರಾಜು ದೇವಾಡಿಗ,ಪ್ರಮೋದ್ ಪೂಜಾರಿ ಉಪಸ್ಥಿತರಿದ್ದರು.























































































































































































































































































































































































































































































































































































































































































































































































































































































































































































































































































































































































































































































































































































































































































