ಎಸ್‍ಎಸ್‍ಎಲ್‍ಸಿ ಫಲಿತಾಂಶ-2023 ಸಂಭ್ರಮ,ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಅಭಿನಂದನೆ

Share


ಕುಂದಾಪುರ:ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು,ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಬೈಂದೂರು,ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೈಂದೂರು ವತಿಯಿಂದ ಎಸ್‍ಎಸ್‍ಎಲ್‍ಸಿ ಫಲಿತಾಂಶ-2023 ಸಂಭ್ರಮ ಮತ್ತು ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಸನ್ಮಾನ ಅಭಿನಂದನಾ ಕಾರ್ಯಕ್ರಮ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶಿಕ್ಷಕರು ಮಕ್ಕಳಿಗೆ ಸ್ಫೂರ್ತಿದಾಯಕರಾದರೆ ಮಾತ್ರ ಹೆಚ್ಚಿನ ರೀತಿಯಲ್ಲಿ ಮಕ್ಕಳು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಕೊಲ್ಲೂರು ದೇವಳದ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ,ವಿದ್ಯಾಂಗ ಉಪ ನಿರ್ದೇಶಕ ಗಣಪತಿ.ಕೆ,ಕ್ಷೇತ್ರ ಶಿಕ್ಷಣಾಧಿಕಾರಿ ಕುಂದಾಪುರ ಕಾಂತರಾಜು,ಬೈಂದೂರು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘ ಬೈಂದೂರು ಅಧ್ಯಕ್ಷ ಆನಂದ ಮುದ್ದೋಡಿ,ಹಿಂದೂ ಅಭ್ಯುದಯ ಸಂಘ ನಾವುಂದ ಅಧ್ಯಕ್ಷ ಶಶಿಧರ ಶೆಟ್ಟಿ,ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಬೈಂದೂರು ಎಂಜಿ ಮಂಜುನಾಥ,ಬಿಆರ್‍ಪಿ ಸುಧಾಕರ ದೇವಾಡಿಗ,ವೆಂಕಟೇಶ್ ಶಾಸ್ತ್ರಿ ಉಪಸ್ಥಿತರಿದ್ದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಶಾಲೆಗಳನ್ನು ಹಾಗೂ 9 ಶಾಲೆಗಳ ಮುಖ್ಯೋಪಾಧ್ಯಾಯರನ್ನು,ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ನೋಡಲ್ ಅಧಿಕಾರಿ ಕರುಣಾಕರ್ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕ ಶಿವರಾಮ ಮಧ್ಯಸ್ಥ ನಿರೂಪಿಸಿದರು.ಬಿಆರ್‍ಪಿ ಮಂಜುನಾಥ್ ನಾಯಕ್ ವಂದಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page