ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ದೇವಾಡಿಗರಿಗೆ ಅಭಿನಂದನೆ
ಕುಂದಾಪುರ:ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಾಜೇಶ್.ಎನ್ ದೇವಾಡಿಗ ಅವರನ್ನು ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಿ ಸಂಘದ ಕಛೇರಿಯಲ್ಲಿ ಗುರುವಾರ ಸನ್ಮಾನಿಸಲಾಯಿತು.ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ ಹರ್ಕೂರು,ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವರಾಮ ಯಡ್ತರೆ,ವ್ಯವಸ್ಥಾಪಕ ಸಂಜೀವ ಪೂಜಾರಿ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.