ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Share

Advertisement
Advertisement

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು.

Advertisement

ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ನರೇಂದ್ರ ಕುಮಾರ್ ಕೋಟ ಅವರು ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕವಾಗಿ, ಭಾವನಾತ್ಮಕವಾಗಿ ಇರುವುದು ಬಹಳಷ್ಟು ಮುಖ್ಯವಾಗಿದೆ ಎಂದು ಹೇಳಿದರು.
ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ,ನಿರ್ದೇಶಕಿ ಮಮತಾ,ಕಾಲೇಜಿನ ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ, ವೈಸ್ ಪ್ರಿನ್ಸಿಪಾಲ್ ಸುಜಾತ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿ ಝಮ್ರಾನ್ ನಿರೂಪಿಸಿದರು.ಸುಶ್ಮಿತಾ ಸ್ವಾಗತಿಸಿದರು.ವಿದ್ಯಾರ್ಥಿನಿ ಜಯಶ್ರೀ ಸಹಕರಿಸಿದರು.ಪ್ರಿಯದರ್ಶಿನಿ ವಂದಿಸಿದರು.

Advertisement
Advertisement


Share

Leave a comment

Your email address will not be published. Required fields are marked *

You cannot copy content of this page