ಗಂಗೊಳ್ಳಿ :ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ
ಕುಂದಾಪುರ:ತಾಲೂಕಿನ ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ ರಾಧಾಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಉಮೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ವಿಜ್ಞಾನ ಶಿಕ್ಷಕ ಶಶಿಶಂಕರ್ ಎಚ್ಎಮ್ ವಿಜ್ಞಾನ ದಿನಾಚರಣೆ ಔಚಿತ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.ಎಸ್ಡಿಎಂಸಿ ಸದಸ್ಯ ಅಶೋಕ ಪೂಜಾರಿ,ಶಿಕ್ಷಕವೃಂದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಲಾಯಿತು.ವಿಜ್ಞಾನಕ್ಕೆ ಸಂಬಂಧಿಸಿದ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ಸ್ವಾಗತಿಸಿದರು.ಅನಿಕಾ ಮತ್ತು ಸನ್ವಿ ನಿರೂಪಿಸಿದರು.ಸಾಕ್ಷಿ ವಾಚಿಸಿದರು.ಶ್ರೇಜಸ್ ವಂದಿಸಿದರು.