ಇಬ್ರಾಹಿಂ ಗಂಗೊಳ್ಳಿಗೆ ಸನ್ಮಾನ
ಕುಂದಾಪುರ:ತುರ್ತು ಸಂದರ್ಭದ ಪರಿಸ್ಥಿತಿಯಲ್ಲಿ ಹಾಗೂ ಅಪಘಾತದ ಸಮಯದಲ್ಲಿ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು,ಅನಾಥ ಶವಗಳನ್ನು ಶವಾಗಾರಕ್ಕೆ ತಲುಪಿಸಲು ಆಂಬ್ಯುಲೆನ್ಸ್ ಸೇವೆ ಮೂಲಕ ಜನಾಸೇವಾ ಕಾರ್ಯಗಳನ್ನು ಮಾಡುತ್ತಿರುವ ಜೀವರಕ್ಷಕ ಎಂದೆ ಖ್ಯಾತಿಗಳಿಸಿರುವ ಸಮಾಜ ಸೇವಕ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿಯಾಗಿರುವ ಮೊಹಮ್ಮದ್ ಇಬ್ರಾಹಿಂ ಗಂಗೊಳ್ಳಿ ಅವರನ್ನು ಗಂಗೊಳ್ಳಿಯಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕ್ರಿಕೆಟ್ ಟ್ರೋಫಿ-2024 ರ ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.