ಸ್ವಾತಿ ಸ್ವಸಹಾಯ ಸಂಘಕ್ಕೆ ಸನ್ಮಾನ
ಕುಂದಾಪುರ:25 ವರ್ಷಗಳನ್ನು ಪೂರೈಸಿರುವ,3 ಕೋಟಿಗೂ ಅಧಿಕ ವ್ಯವಹಾರವನ್ನು ನಡೆಸಿಕೊಂಡು ಬಂದಿರುವ ನವೋದಯ ಸ್ವಾತಿ ಸ್ವಸಹಾಯ ಸಂಘ ಮರವಂತೆ ಅದರ ಸದಸ್ಯರನ್ನು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಎಂ ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಎಸ್ ಪೂಜಾರಿ,ಶಾಸಕ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.































































































































































































































































































































































































































































































































































































































































































































































































































































































































































































































































































































































































































































































































































































































































































