ಕಾರು ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಬಿದ್ದ ಪರಿಣಾಮ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದ್ರುವ್ ಯಾದವ್,ಸಿದ್ದಾರ್ಥ್, ಕೃಷ್ ಮತ್ತು ಮಹಮ್ಮದ್ ಕುರೇಶಿ ಗಾಯಗೊಂಡ ವಿದ್ಯಾರ್ಥಿಗಳು,ಸಹಪಾಟಿಗಳು ಜೊತೆ ಗೂಡಿ ಮಂಗಳವಾರ ಬೆಳಗ್ಗೆ ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ.ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.