ಶ್ರೀಸುಬ್ರಹ್ಮಣ್ಯ ದೇವರಿಗೆ ತುಲಾಭಾರ ಸೇವೆ ಸಮರ್ಪಣೆ
ಕುಂದಾಪುರ:ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀದೆವರಿಗೆ ತುಲಾಭಾರ ಸೇವೆ,ಹಣ್ಣುಕಾಯಿ,ಮಂಗಳಾರತಿ,ಹರಿವಾಣ ನೈವೇದ್ಯ ಸೇವೆ,ಅನ್ನದಾನ ಸೇವೆ ಬುಧವಾರ ನಡೆಯಿತು.
ಕಷ್ಟ ಕಾಲದಲ್ಲಿ ಹೇಳಿಕೊಂಡ ತುಲಾಭಾರ ಸೇವೆಯನ್ನು ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಭಕ್ತರು ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ ಶೆಟ್ಟಿ,ಅರ್ಚಕರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕ ಅನ್ನಸಂತರ್ಪಣೆ
ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ಮಂಗಳವಾರ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.