ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

Share

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ.ಅಪಘಾತದ ತೀವೃತೆ ಗೂಳಿ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಉಡುಪಿ ಯಿಂದ ಮುರುಡೇಶ್ವರಕ್ಕೆ ತೆರಳಿ ಬಳಿಕ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದರ್ಶನ ಮಾಡಿಕೊಂಡು ಮಾರ್ಗ ಮಧ್ಯದಲ್ಲಿ ಮರವಂತೆ ಬೀಚ್‍ಗೆ ಭೇಟಿ ಮರಳಿ ಉಡುಪಿಗೆ ಸಾಗುತ್ತಿದ್ದ ಸಮಯದಲ್ಲಿ ಮೊವಾಡಿ ಕ್ರಾಸ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಡಿವೈಡರ್ ಮಧ್ಯೆ ಬೆಳೆದಿದ್ದ ಹಸಿ ಹುಲ್ಲು ತಿನ್ನುತ್ತಿದ್ದ ಗೂಳಿ ಏಕಾಎಕಿ ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದು ಗುದ್ದಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗೂಳಿ ಸಾವನ್ನಪ್ಪಿದೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಸ್ಥಳ ಮಹಜರು ನಡೆಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page