ಮೀನುಗಾರರಿಂದ ಸಮುದ್ರ ರಾಜನಿಗೆ ಪ್ರಾರ್ಥನೆ ಸಲ್ಲಿಕೆ
ಬೈಂದೂರು:ಮೀನುಗಾರಿಕೆ ಕುಂಠಿತವಾದ ಹಿನ್ನೆಲೆಯಲ್ಲಿ ಮತ್ಸ್ಯ ಸಂಪತ್ತು ವೃದ್ಧಿಯಾಗಲಿ ಎಂದು ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವರಿಗೆ ಬುಧವಾರ ವಿಶೇಷವಾದ ಪೂಜೆ ಸಲ್ಲಿಸಿ,ಸಮುದ್ರ ರಾಜನಿಗೆ ಪ್ರಾರ್ಥನೆ ಸಲ್ಲಿಸಲಾಯಿತು.ಈ ಸಂದರ್ಭ ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.