ಪ್ರಾದೇಶಿಕ ಸುದ್ದಿ

ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಪುಸ್ತಕ ಬಿಡುಗಡೆ

Share

ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ ನಡೆಯಿತು.
ಕನ್ನಡದ ಖ್ಯಾತ ಲೇಖಕ ವಿಮರ್ಶಕರಾದ ಎಸ್.ದಿವಾಕರ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,ಇತಿಹಾಸ ಪ್ರಸಿದ್ಧರು ಇಲ್ಲಿ ಹಿಂದೊಮ್ಮೆ ವಾಸಿಸಿದ್ದ ಕಟ್ಟಡಗಳ ಗೋಡೆಯ ಮೇಲೆ ಬ್ಲೂಫ್ಲೇಕ್ ಅಥವಾ ನೀಲಿಫಲಕ ಅಳವಡಿಸುವ ಪರಂಪರೆ ಇದೆ.ಈ ಫಲಕಗಳಲ್ಲಿ ಅಲ್ಲಿ ವಾಸಿಸಿದ್ದ ವ್ಯಕ್ತಿಯ ಹೆಸರು, ಅವರ ಜೀವಮಾನ,ಸಾಧನೆಯ ಕ್ಷೇತ್ರದ ಸಂಕ್ಷಿಪ್ತ ಮಾಹಿತಿ ಇರುತ್ತದೆ.ಹಾಗೆ ನೋಡಿದರೆ ಈ ಒಂದೊಂದು ನೀಲಿ ಫಲಕದ್ದೂ ಒಂದೊಂದು ಕತೆ ಇದ್ದೆ ಇರುತ್ತದೆ.ಆಯ್ದ 28 ಸಾಧಕರ ಕುರಿತಾದ ನಿರೂಪಣೆ ಇವೊಂದು ಪುಸ್ತಕದಲ್ಲಿ ಅಚ್ಚೊತ್ತಿಸಲಾಗಿದೆ ಎಂದರು.
ಇಂತಹ ನಗರದ ಕತೆಯನ್ನು ಸೂಚ್ಯವಾಗಿ,ಧ್ವನಿಪೂರ್ಣವಾಗಿ ನಿರೂಪಿಸ ಬಯಸುವ ಲೇಖಕನಿಗೆ ಇತಿಹಾಸದ,ಅಪೂರ್ವ ಸಾಹಸಿಗಳ,ರಾಜಕೀಯ,ಕಲೆ,ಸಂಸ್ಕøತಿಗಳ ಕುರಿತು ಜ್ಞಾನವಿರಬೇಕು ಎಂದು ಅಭಿಪ್ರಾಯಪಟ್ಟರು.ಆ ಒಂದು ನಿಟ್ಟಿನಲ್ಲಿ ಇವೊಂದು ಪುಸ್ತಕವೂ ಓದುಗರ ಮೆಚ್ಚುಗೆ ಗಳಿಸಲಿದೆ ಎಂದು ಹಾರೈಸಿದರು.
ಪ್ರಾಧ್ಯಾಪಕಿ ಲೇಖಕಿ ಜಯಶ್ರೀ ಕಾಸರವಳ್ಳಿ,ಲಂಡನ್ ವಾಸಿ ಹಿರಿಯ ಮನೋವೈದ್ಯ ಡಾ. ಗೋಪಾಲಕೃಷ್ಣ ಹೆಗಡೆ,ಪೂರ್ಣಿಮಾ ಹೆಗಡೆ,ದೀಪಕ್ ಬಿ.ಜೆ ಮತ್ತಿತರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago