ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ ನಡೆಯಿತು.
ಕನ್ನಡದ ಖ್ಯಾತ ಲೇಖಕ ವಿಮರ್ಶಕರಾದ ಎಸ್.ದಿವಾಕರ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,ಇತಿಹಾಸ ಪ್ರಸಿದ್ಧರು ಇಲ್ಲಿ ಹಿಂದೊಮ್ಮೆ ವಾಸಿಸಿದ್ದ ಕಟ್ಟಡಗಳ ಗೋಡೆಯ ಮೇಲೆ ಬ್ಲೂಫ್ಲೇಕ್ ಅಥವಾ ನೀಲಿಫಲಕ ಅಳವಡಿಸುವ ಪರಂಪರೆ ಇದೆ.ಈ ಫಲಕಗಳಲ್ಲಿ ಅಲ್ಲಿ ವಾಸಿಸಿದ್ದ ವ್ಯಕ್ತಿಯ ಹೆಸರು, ಅವರ ಜೀವಮಾನ,ಸಾಧನೆಯ ಕ್ಷೇತ್ರದ ಸಂಕ್ಷಿಪ್ತ ಮಾಹಿತಿ ಇರುತ್ತದೆ.ಹಾಗೆ ನೋಡಿದರೆ ಈ ಒಂದೊಂದು ನೀಲಿ ಫಲಕದ್ದೂ ಒಂದೊಂದು ಕತೆ ಇದ್ದೆ ಇರುತ್ತದೆ.ಆಯ್ದ 28 ಸಾಧಕರ ಕುರಿತಾದ ನಿರೂಪಣೆ ಇವೊಂದು ಪುಸ್ತಕದಲ್ಲಿ ಅಚ್ಚೊತ್ತಿಸಲಾಗಿದೆ ಎಂದರು.
ಇಂತಹ ನಗರದ ಕತೆಯನ್ನು ಸೂಚ್ಯವಾಗಿ,ಧ್ವನಿಪೂರ್ಣವಾಗಿ ನಿರೂಪಿಸ ಬಯಸುವ ಲೇಖಕನಿಗೆ ಇತಿಹಾಸದ,ಅಪೂರ್ವ ಸಾಹಸಿಗಳ,ರಾಜಕೀಯ,ಕಲೆ,ಸಂಸ್ಕøತಿಗಳ ಕುರಿತು ಜ್ಞಾನವಿರಬೇಕು ಎಂದು ಅಭಿಪ್ರಾಯಪಟ್ಟರು.ಆ ಒಂದು ನಿಟ್ಟಿನಲ್ಲಿ ಇವೊಂದು ಪುಸ್ತಕವೂ ಓದುಗರ ಮೆಚ್ಚುಗೆ ಗಳಿಸಲಿದೆ ಎಂದು ಹಾರೈಸಿದರು.
ಪ್ರಾಧ್ಯಾಪಕಿ ಲೇಖಕಿ ಜಯಶ್ರೀ ಕಾಸರವಳ್ಳಿ,ಲಂಡನ್ ವಾಸಿ ಹಿರಿಯ ಮನೋವೈದ್ಯ ಡಾ. ಗೋಪಾಲಕೃಷ್ಣ ಹೆಗಡೆ,ಪೂರ್ಣಿಮಾ ಹೆಗಡೆ,ದೀಪಕ್ ಬಿ.ಜೆ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…