ಪ್ರಾದೇಶಿಕ ಸುದ್ದಿ

ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಪುಸ್ತಕ ಬಿಡುಗಡೆ

Share

ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ ನಡೆಯಿತು.
ಕನ್ನಡದ ಖ್ಯಾತ ಲೇಖಕ ವಿಮರ್ಶಕರಾದ ಎಸ್.ದಿವಾಕರ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,ಇತಿಹಾಸ ಪ್ರಸಿದ್ಧರು ಇಲ್ಲಿ ಹಿಂದೊಮ್ಮೆ ವಾಸಿಸಿದ್ದ ಕಟ್ಟಡಗಳ ಗೋಡೆಯ ಮೇಲೆ ಬ್ಲೂಫ್ಲೇಕ್ ಅಥವಾ ನೀಲಿಫಲಕ ಅಳವಡಿಸುವ ಪರಂಪರೆ ಇದೆ.ಈ ಫಲಕಗಳಲ್ಲಿ ಅಲ್ಲಿ ವಾಸಿಸಿದ್ದ ವ್ಯಕ್ತಿಯ ಹೆಸರು, ಅವರ ಜೀವಮಾನ,ಸಾಧನೆಯ ಕ್ಷೇತ್ರದ ಸಂಕ್ಷಿಪ್ತ ಮಾಹಿತಿ ಇರುತ್ತದೆ.ಹಾಗೆ ನೋಡಿದರೆ ಈ ಒಂದೊಂದು ನೀಲಿ ಫಲಕದ್ದೂ ಒಂದೊಂದು ಕತೆ ಇದ್ದೆ ಇರುತ್ತದೆ.ಆಯ್ದ 28 ಸಾಧಕರ ಕುರಿತಾದ ನಿರೂಪಣೆ ಇವೊಂದು ಪುಸ್ತಕದಲ್ಲಿ ಅಚ್ಚೊತ್ತಿಸಲಾಗಿದೆ ಎಂದರು.
ಇಂತಹ ನಗರದ ಕತೆಯನ್ನು ಸೂಚ್ಯವಾಗಿ,ಧ್ವನಿಪೂರ್ಣವಾಗಿ ನಿರೂಪಿಸ ಬಯಸುವ ಲೇಖಕನಿಗೆ ಇತಿಹಾಸದ,ಅಪೂರ್ವ ಸಾಹಸಿಗಳ,ರಾಜಕೀಯ,ಕಲೆ,ಸಂಸ್ಕøತಿಗಳ ಕುರಿತು ಜ್ಞಾನವಿರಬೇಕು ಎಂದು ಅಭಿಪ್ರಾಯಪಟ್ಟರು.ಆ ಒಂದು ನಿಟ್ಟಿನಲ್ಲಿ ಇವೊಂದು ಪುಸ್ತಕವೂ ಓದುಗರ ಮೆಚ್ಚುಗೆ ಗಳಿಸಲಿದೆ ಎಂದು ಹಾರೈಸಿದರು.
ಪ್ರಾಧ್ಯಾಪಕಿ ಲೇಖಕಿ ಜಯಶ್ರೀ ಕಾಸರವಳ್ಳಿ,ಲಂಡನ್ ವಾಸಿ ಹಿರಿಯ ಮನೋವೈದ್ಯ ಡಾ. ಗೋಪಾಲಕೃಷ್ಣ ಹೆಗಡೆ,ಪೂರ್ಣಿಮಾ ಹೆಗಡೆ,ದೀಪಕ್ ಬಿ.ಜೆ ಮತ್ತಿತರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago