ಕುಂದಾಪುರ

ದೇವರಿಗೆ ಅರ್ಪಿಸಿದ ಚಿನ್ನ ಕಳವುಗೈದ ಅರ್ಚಕ:ನಕಲಿ ಚಿನ್ನಾಭರಣವನ್ನು ದೇವರ ಮೂರ್ತಿ ಮೇಲೆ ತೋಡಿಸಿ ವಂಚನೆ

Share

Advertisement
Advertisement

ಕುಂದಾಪುರ:ತಾಲೂಕಿನ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಭಕ್ತರು ಅರ್ಪಿಸಿದ ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ದೇವಳದ ಅರ್ಚಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿರಸಿ ತಾಲೂಕಿನ ಮೂರೆಗಾರ ಸಾಲಕಣಿ ಗ್ರಾಮದ ನಿವಾಸಿ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಆಧಾರದ ಮೇಲೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಶಿರಸಿ ತಾಲೂಕಿನ ನರಸಿಂಹ ಭಟ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಮೇ.16 ರ 2024 ರಂದು ನೇಮಕ ಮಾಡಿ ಕೊಂಡಿದೆ.
ಆಡಳಿತ ಮಂಡಳಿ ಹಾಗೂ ಭಕ್ತರು ಹರಕೆ ಮತ್ತು ಸೇವೆ ರೂಪದಲ್ಲಿ ನೀಡಿರುವ ನಾನಾ ಬಗೆಯ ಚಿನ್ನಾಭರಣಗಳನ್ನು ದೇವರ ಮೂರ್ತಿಗೆ ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿ ದಿನ ಮೈ ಮೇಲೆ ಇದ್ದಿರುತ್ತಿದೆ.
ದೇವಿಯ ಚಿನ್ನಾಭರಣ ಕಳವು ಗೈದ ಅರ್ಚಕ:ವರ್ಷಂಪ್ರತಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಸೆ.21 ರ ಸಂಜೆ 7 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜಾ ಕೈಂಕರ್ಯಗಳನ್ನು ಮಾಡುತ್ತಿರುವ ಆರೋಪಿತ ಅರ್ಚಕರಲ್ಲಿ ಉತ್ಸವದ ಸಲುವಾಗಿ ದೇವರ ಮೈಮೇಲಿದ್ದ ಚಿನ್ನಾಭರಣಗಳನ್ನು ಶುದ್ಧಚಾರ ಮಾಡುವ ಬಗ್ಗೆ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಕೇಳಿಕೊಂಡಿದೆ.
ಅರ್ಚಕರಿಂದ ಚಿನ್ನಾಭರಣವನ್ನು ಪಡೆದುಕೊಂಡಿದ್ದ ದೇವಸ್ಥಾನದ ಆಡಳಿತ ಮಂಡಳಿ ಆಭರಣಗಳನ್ನು ಸೂಕ್ಷ್ಮವಾಗಿ ಪರೀಕ್ಷಿಶಿಸಿದೆ.ದೇವರ ಮೈ ಮೇಲೆ ಇದ್ದ ಆಭರಣಗಳು ಮೂಲ ರೂಪದಲ್ಲಿ ಇರದೆ ಬೇರೆ ರೀತಿಯಲ್ಲಿ ಇದ್ದ ಕಾರಣ ಅರ್ಚಕರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

264 ಗ್ರಾಂ ತೂಕದ ಅಂದಾಜು 21,12,000 ರೂ ಮೌಲ್ಯದ ಚಿನ್ನಾಭರಣ ಅರ್ಚಕರಿಂದ ವಂಚನೆಗೆ ಒಳಗಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದ್ದು ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೆÇಲೀಸ್ ಇಲಾಖೆ ಕೈಗೊಂಡಿದೆ.
ಬೆಚ್ಚಿಬಿದ್ದ ಭಕ್ತ ಸಮೂಹ:ಮೀನುಗಾರರ ಆರಾಧ್ಯ ದೇವತೆ ಹಾಗೂ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ಮೈ ಮೇಲಿದ್ದ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ದೇವರ ಪೂಜಾ ಕೈಂಕರ್ಯಗಳನ್ನು ನಡೆಸಿ ಕೊಂಡು ಬರುತ್ತಿದ್ದ ಅರ್ಚಕರೆ ಸ್ವತಃ ದೋಚಿರುವ ಪ್ರಕರಣದ ಬಗ್ಗೆ ಭಕ್ತ ಸಮೂಹ ಬೆಚ್ಚಿ ಬಿದ್ದಿದೆ.ನವರಾತ್ರಿ ಉತ್ಸವದ ಮುನ್ನವೇ ಅರ್ಚಕರ ಶೋಗಲಾಡಿತನ ಬಯಲಾಗಿದೆ.
ಚಿನ್ನಾಭರಣದ ವಿವರದ ನೋಟ
40 ಗ್ರಾಂ ತೂಕದ ಚಿನ್ನದ ಜೋಬಿನ ಸರ-1
73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ ಹವಳ ಸೇರಿ
73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ
6 ಗ್ರಾಂ ತೂಕದ ಚಿನ್ನದ ತಾಳಿ-3
64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ 1
8 ಗ್ರಾಂ ತೂಕದ ಚಿನ್ನದ ಚೈನ್ ಸರ 1
ಒಟ್ಟು-264 ಗ್ರಾಂ,ಮೌಲ್ಯ-21.12 ಲಕ್ಷ.ರೂ

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

2 days ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

4 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

5 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago