ಕುಂದಾಪುರ

ದೇವರಿಗೆ ಅರ್ಪಿಸಿದ ಚಿನ್ನ ಕಳವುಗೈದ ಅರ್ಚಕ:ನಕಲಿ ಚಿನ್ನಾಭರಣವನ್ನು ದೇವರ ಮೂರ್ತಿ ಮೇಲೆ ತೋಡಿಸಿ ವಂಚನೆ

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಭಕ್ತರು ಅರ್ಪಿಸಿದ ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ದೇವಳದ ಅರ್ಚಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿರಸಿ ತಾಲೂಕಿನ ಮೂರೆಗಾರ ಸಾಲಕಣಿ ಗ್ರಾಮದ ನಿವಾಸಿ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಆಧಾರದ ಮೇಲೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಶಿರಸಿ ತಾಲೂಕಿನ ನರಸಿಂಹ ಭಟ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಮೇ.16 ರ 2024 ರಂದು ನೇಮಕ ಮಾಡಿ ಕೊಂಡಿದೆ.
ಆಡಳಿತ ಮಂಡಳಿ ಹಾಗೂ ಭಕ್ತರು ಹರಕೆ ಮತ್ತು ಸೇವೆ ರೂಪದಲ್ಲಿ ನೀಡಿರುವ ನಾನಾ ಬಗೆಯ ಚಿನ್ನಾಭರಣಗಳನ್ನು ದೇವರ ಮೂರ್ತಿಗೆ ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿ ದಿನ ಮೈ ಮೇಲೆ ಇದ್ದಿರುತ್ತಿದೆ.
ದೇವಿಯ ಚಿನ್ನಾಭರಣ ಕಳವು ಗೈದ ಅರ್ಚಕ:ವರ್ಷಂಪ್ರತಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಸೆ.21 ರ ಸಂಜೆ 7 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜಾ ಕೈಂಕರ್ಯಗಳನ್ನು ಮಾಡುತ್ತಿರುವ ಆರೋಪಿತ ಅರ್ಚಕರಲ್ಲಿ ಉತ್ಸವದ ಸಲುವಾಗಿ ದೇವರ ಮೈಮೇಲಿದ್ದ ಚಿನ್ನಾಭರಣಗಳನ್ನು ಶುದ್ಧಚಾರ ಮಾಡುವ ಬಗ್ಗೆ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಕೇಳಿಕೊಂಡಿದೆ.
ಅರ್ಚಕರಿಂದ ಚಿನ್ನಾಭರಣವನ್ನು ಪಡೆದುಕೊಂಡಿದ್ದ ದೇವಸ್ಥಾನದ ಆಡಳಿತ ಮಂಡಳಿ ಆಭರಣಗಳನ್ನು ಸೂಕ್ಷ್ಮವಾಗಿ ಪರೀಕ್ಷಿಶಿಸಿದೆ.ದೇವರ ಮೈ ಮೇಲೆ ಇದ್ದ ಆಭರಣಗಳು ಮೂಲ ರೂಪದಲ್ಲಿ ಇರದೆ ಬೇರೆ ರೀತಿಯಲ್ಲಿ ಇದ್ದ ಕಾರಣ ಅರ್ಚಕರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

264 ಗ್ರಾಂ ತೂಕದ ಅಂದಾಜು 21,12,000 ರೂ ಮೌಲ್ಯದ ಚಿನ್ನಾಭರಣ ಅರ್ಚಕರಿಂದ ವಂಚನೆಗೆ ಒಳಗಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದ್ದು ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೆÇಲೀಸ್ ಇಲಾಖೆ ಕೈಗೊಂಡಿದೆ.
ಬೆಚ್ಚಿಬಿದ್ದ ಭಕ್ತ ಸಮೂಹ:ಮೀನುಗಾರರ ಆರಾಧ್ಯ ದೇವತೆ ಹಾಗೂ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ಮೈ ಮೇಲಿದ್ದ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ದೇವರ ಪೂಜಾ ಕೈಂಕರ್ಯಗಳನ್ನು ನಡೆಸಿ ಕೊಂಡು ಬರುತ್ತಿದ್ದ ಅರ್ಚಕರೆ ಸ್ವತಃ ದೋಚಿರುವ ಪ್ರಕರಣದ ಬಗ್ಗೆ ಭಕ್ತ ಸಮೂಹ ಬೆಚ್ಚಿ ಬಿದ್ದಿದೆ.ನವರಾತ್ರಿ ಉತ್ಸವದ ಮುನ್ನವೇ ಅರ್ಚಕರ ಶೋಗಲಾಡಿತನ ಬಯಲಾಗಿದೆ.
ಚಿನ್ನಾಭರಣದ ವಿವರದ ನೋಟ
40 ಗ್ರಾಂ ತೂಕದ ಚಿನ್ನದ ಜೋಬಿನ ಸರ-1
73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ ಹವಳ ಸೇರಿ
73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ
6 ಗ್ರಾಂ ತೂಕದ ಚಿನ್ನದ ತಾಳಿ-3
64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ 1
8 ಗ್ರಾಂ ತೂಕದ ಚಿನ್ನದ ಚೈನ್ ಸರ 1
ಒಟ್ಟು-264 ಗ್ರಾಂ,ಮೌಲ್ಯ-21.12 ಲಕ್ಷ.ರೂ

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

1 month ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago