ಕುಂದಾಪುರ

ದೇವರಿಗೆ ಅರ್ಪಿಸಿದ ಚಿನ್ನ ಕಳವುಗೈದ ಅರ್ಚಕ:ನಕಲಿ ಚಿನ್ನಾಭರಣವನ್ನು ದೇವರ ಮೂರ್ತಿ ಮೇಲೆ ತೋಡಿಸಿ ವಂಚನೆ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಭಕ್ತರು ಅರ್ಪಿಸಿದ ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ದೇವಳದ ಅರ್ಚಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿರಸಿ ತಾಲೂಕಿನ ಮೂರೆಗಾರ ಸಾಲಕಣಿ ಗ್ರಾಮದ ನಿವಾಸಿ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಆಧಾರದ ಮೇಲೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಶಿರಸಿ ತಾಲೂಕಿನ ನರಸಿಂಹ ಭಟ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಮೇ.16 ರ 2024 ರಂದು ನೇಮಕ ಮಾಡಿ ಕೊಂಡಿದೆ.
ಆಡಳಿತ ಮಂಡಳಿ ಹಾಗೂ ಭಕ್ತರು ಹರಕೆ ಮತ್ತು ಸೇವೆ ರೂಪದಲ್ಲಿ ನೀಡಿರುವ ನಾನಾ ಬಗೆಯ ಚಿನ್ನಾಭರಣಗಳನ್ನು ದೇವರ ಮೂರ್ತಿಗೆ ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿ ದಿನ ಮೈ ಮೇಲೆ ಇದ್ದಿರುತ್ತಿದೆ.
ದೇವಿಯ ಚಿನ್ನಾಭರಣ ಕಳವು ಗೈದ ಅರ್ಚಕ:ವರ್ಷಂಪ್ರತಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಸೆ.21 ರ ಸಂಜೆ 7 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜಾ ಕೈಂಕರ್ಯಗಳನ್ನು ಮಾಡುತ್ತಿರುವ ಆರೋಪಿತ ಅರ್ಚಕರಲ್ಲಿ ಉತ್ಸವದ ಸಲುವಾಗಿ ದೇವರ ಮೈಮೇಲಿದ್ದ ಚಿನ್ನಾಭರಣಗಳನ್ನು ಶುದ್ಧಚಾರ ಮಾಡುವ ಬಗ್ಗೆ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಕೇಳಿಕೊಂಡಿದೆ.
ಅರ್ಚಕರಿಂದ ಚಿನ್ನಾಭರಣವನ್ನು ಪಡೆದುಕೊಂಡಿದ್ದ ದೇವಸ್ಥಾನದ ಆಡಳಿತ ಮಂಡಳಿ ಆಭರಣಗಳನ್ನು ಸೂಕ್ಷ್ಮವಾಗಿ ಪರೀಕ್ಷಿಶಿಸಿದೆ.ದೇವರ ಮೈ ಮೇಲೆ ಇದ್ದ ಆಭರಣಗಳು ಮೂಲ ರೂಪದಲ್ಲಿ ಇರದೆ ಬೇರೆ ರೀತಿಯಲ್ಲಿ ಇದ್ದ ಕಾರಣ ಅರ್ಚಕರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

264 ಗ್ರಾಂ ತೂಕದ ಅಂದಾಜು 21,12,000 ರೂ ಮೌಲ್ಯದ ಚಿನ್ನಾಭರಣ ಅರ್ಚಕರಿಂದ ವಂಚನೆಗೆ ಒಳಗಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದ್ದು ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೆÇಲೀಸ್ ಇಲಾಖೆ ಕೈಗೊಂಡಿದೆ.
ಬೆಚ್ಚಿಬಿದ್ದ ಭಕ್ತ ಸಮೂಹ:ಮೀನುಗಾರರ ಆರಾಧ್ಯ ದೇವತೆ ಹಾಗೂ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ಮೈ ಮೇಲಿದ್ದ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ದೇವರ ಪೂಜಾ ಕೈಂಕರ್ಯಗಳನ್ನು ನಡೆಸಿ ಕೊಂಡು ಬರುತ್ತಿದ್ದ ಅರ್ಚಕರೆ ಸ್ವತಃ ದೋಚಿರುವ ಪ್ರಕರಣದ ಬಗ್ಗೆ ಭಕ್ತ ಸಮೂಹ ಬೆಚ್ಚಿ ಬಿದ್ದಿದೆ.ನವರಾತ್ರಿ ಉತ್ಸವದ ಮುನ್ನವೇ ಅರ್ಚಕರ ಶೋಗಲಾಡಿತನ ಬಯಲಾಗಿದೆ.
ಚಿನ್ನಾಭರಣದ ವಿವರದ ನೋಟ
40 ಗ್ರಾಂ ತೂಕದ ಚಿನ್ನದ ಜೋಬಿನ ಸರ-1
73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ ಹವಳ ಸೇರಿ
73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ
6 ಗ್ರಾಂ ತೂಕದ ಚಿನ್ನದ ತಾಳಿ-3
64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ 1
8 ಗ್ರಾಂ ತೂಕದ ಚಿನ್ನದ ಚೈನ್ ಸರ 1
ಒಟ್ಟು-264 ಗ್ರಾಂ,ಮೌಲ್ಯ-21.12 ಲಕ್ಷ.ರೂ

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago