ಕುಂದಾಪುರ

ದೇವರಿಗೆ ಅರ್ಪಿಸಿದ ಚಿನ್ನ ಕಳವುಗೈದ ಅರ್ಚಕ:ನಕಲಿ ಚಿನ್ನಾಭರಣವನ್ನು ದೇವರ ಮೂರ್ತಿ ಮೇಲೆ ತೋಡಿಸಿ ವಂಚನೆ

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ಭಕ್ತರು ಅರ್ಪಿಸಿದ ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ದೇವಳದ ಅರ್ಚಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿರಸಿ ತಾಲೂಕಿನ ಮೂರೆಗಾರ ಸಾಲಕಣಿ ಗ್ರಾಮದ ನಿವಾಸಿ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಆಧಾರದ ಮೇಲೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಶಿರಸಿ ತಾಲೂಕಿನ ನರಸಿಂಹ ಭಟ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಮೇ.16 ರ 2024 ರಂದು ನೇಮಕ ಮಾಡಿ ಕೊಂಡಿದೆ.
ಆಡಳಿತ ಮಂಡಳಿ ಹಾಗೂ ಭಕ್ತರು ಹರಕೆ ಮತ್ತು ಸೇವೆ ರೂಪದಲ್ಲಿ ನೀಡಿರುವ ನಾನಾ ಬಗೆಯ ಚಿನ್ನಾಭರಣಗಳನ್ನು ದೇವರ ಮೂರ್ತಿಗೆ ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿ ದಿನ ಮೈ ಮೇಲೆ ಇದ್ದಿರುತ್ತಿದೆ.
ದೇವಿಯ ಚಿನ್ನಾಭರಣ ಕಳವು ಗೈದ ಅರ್ಚಕ:ವರ್ಷಂಪ್ರತಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಸೆ.21 ರ ಸಂಜೆ 7 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜಾ ಕೈಂಕರ್ಯಗಳನ್ನು ಮಾಡುತ್ತಿರುವ ಆರೋಪಿತ ಅರ್ಚಕರಲ್ಲಿ ಉತ್ಸವದ ಸಲುವಾಗಿ ದೇವರ ಮೈಮೇಲಿದ್ದ ಚಿನ್ನಾಭರಣಗಳನ್ನು ಶುದ್ಧಚಾರ ಮಾಡುವ ಬಗ್ಗೆ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಕೇಳಿಕೊಂಡಿದೆ.
ಅರ್ಚಕರಿಂದ ಚಿನ್ನಾಭರಣವನ್ನು ಪಡೆದುಕೊಂಡಿದ್ದ ದೇವಸ್ಥಾನದ ಆಡಳಿತ ಮಂಡಳಿ ಆಭರಣಗಳನ್ನು ಸೂಕ್ಷ್ಮವಾಗಿ ಪರೀಕ್ಷಿಶಿಸಿದೆ.ದೇವರ ಮೈ ಮೇಲೆ ಇದ್ದ ಆಭರಣಗಳು ಮೂಲ ರೂಪದಲ್ಲಿ ಇರದೆ ಬೇರೆ ರೀತಿಯಲ್ಲಿ ಇದ್ದ ಕಾರಣ ಅರ್ಚಕರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

264 ಗ್ರಾಂ ತೂಕದ ಅಂದಾಜು 21,12,000 ರೂ ಮೌಲ್ಯದ ಚಿನ್ನಾಭರಣ ಅರ್ಚಕರಿಂದ ವಂಚನೆಗೆ ಒಳಗಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದ್ದು ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೆÇಲೀಸ್ ಇಲಾಖೆ ಕೈಗೊಂಡಿದೆ.
ಬೆಚ್ಚಿಬಿದ್ದ ಭಕ್ತ ಸಮೂಹ:ಮೀನುಗಾರರ ಆರಾಧ್ಯ ದೇವತೆ ಹಾಗೂ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ಮೈ ಮೇಲಿದ್ದ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ದೇವರ ಪೂಜಾ ಕೈಂಕರ್ಯಗಳನ್ನು ನಡೆಸಿ ಕೊಂಡು ಬರುತ್ತಿದ್ದ ಅರ್ಚಕರೆ ಸ್ವತಃ ದೋಚಿರುವ ಪ್ರಕರಣದ ಬಗ್ಗೆ ಭಕ್ತ ಸಮೂಹ ಬೆಚ್ಚಿ ಬಿದ್ದಿದೆ.ನವರಾತ್ರಿ ಉತ್ಸವದ ಮುನ್ನವೇ ಅರ್ಚಕರ ಶೋಗಲಾಡಿತನ ಬಯಲಾಗಿದೆ.
ಚಿನ್ನಾಭರಣದ ವಿವರದ ನೋಟ
40 ಗ್ರಾಂ ತೂಕದ ಚಿನ್ನದ ಜೋಬಿನ ಸರ-1
73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ ಹವಳ ಸೇರಿ
73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ
6 ಗ್ರಾಂ ತೂಕದ ಚಿನ್ನದ ತಾಳಿ-3
64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ 1
8 ಗ್ರಾಂ ತೂಕದ ಚಿನ್ನದ ಚೈನ್ ಸರ 1
ಒಟ್ಟು-264 ಗ್ರಾಂ,ಮೌಲ್ಯ-21.12 ಲಕ್ಷ.ರೂ

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago