ಹೊಸಾಡು:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ-ಹೊಸಾಡು ಅದರ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ ಹೊಸಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸರ್ವ ಸದಸ್ಯರ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಮುರಳೀಧರ್ ಐತಾಳ್ ಅವರು ಮಾತನಾಡಿ,ಸ್ವಚ್ಛ ಭಾರತ ಪರಿಕಲ್ಪನೆಯಡಿಯಲ್ಲಿ ಸ್ವಚ್ಛತಾ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಆಯೋಜನೆ ಮಾಡುವ ಕುರಿತು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು.ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗಾಗಿ,ಅಶಕ್ತರಿಗೆ ನೆರವು ವಿತರಣೆ ಮತ್ತು ವಿದ್ಯಾರ್ಥಿಗಳನ್ನು ಪ್ರೆÇೀತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದೆ.ನಿರ್ದೇಶಕರ ಮಂಡಳಿ ಮತ್ತು ಸದಸ್ಯರ ಸಹಕಾರ ದಿಂದ ಸಂಘವೂ ಆಡಿಟ್ನಲ್ಲಿ ಎ ಗ್ರೇಡ್ ಪಡೆದುಕೊಂಡಿದೆ.ಪ್ರಸ್ತುತ ಸಾಲಿನ ವರ್ಷದಲ್ಲಿ ಸಂಘವೂ 7.19 ಲಕ್ಷ.ರೂ ನಿವ್ವಳ ಲಾಭ ಗಳಿಸಿದ್ದು.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾವುದು ಎಂದು ಹೇಳಿದರು.
ಜ್ಯೋತಿ ಐತಾಳ್ ಅವರು ಹಿಂದಿನ ಸಾಲಿನ ವರದಿ ಮಂಡಿಸಿ ಒಪ್ಪಿಗೆ ಪಡೆದರು.ಸಿಇಒ ಅಶ್ವಿನಿ 2023-24ನೇ ಸಾಲಿನ ಆಯವ್ಯಯ ಹಾಗೂ ಆಡಳಿತ ವರದಿಯನ್ನು ವಾಚಿಸಿದರು.ಸಂಘದ ನಿರ್ದೇಶಕ ಶಾಂತರಾಮ ಭಟ್ಟ ನಿವ್ವಳ ಲಾಭದ ಹಂಚಿಕೆ ವರದಿಯನ್ನು ಮಂಡಿಸಿದರು.ನಿರ್ದೇಶಕ ಅಶೋಕ ಖಾರ್ವಿ ಅವರು ಮುಂದಿನ ಸಾಲಿನ ಕಾರ್ಯ ಯೋಜನೆಗಳ ಕುರಿತು ವರದಿ ಮಂಡಿಸಿ ಒಪ್ಪಿಗೆ ಪಡೆದುಕೊಂಡರು.ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಕೃಷಿಕರಾದ ಶ್ರೀ ಕೃಷ್ಣ ಕಾರಂತ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫರ್ನಾಂಡಿಸ್,ಉತ್ತಮ ಗ್ರಾಹಕರಾದ ರಾಘವೇಂದ್ರ ಶೆಟ್ಟಿ,ಅಶೋಕ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.ಸಂಘದ ಉಪಾಧ್ಯಕ್ಷ ರವೀಶ ಹೊಳ್ಳ ಮತ್ತು ಎಲ್ಲಾ ನಿರ್ದೇಶಕರು,ಸದಸ್ಯರು,ಸಲಹೆಗಾರರಾದ ವಿಶ್ವಂಭರ ಐತಾಳ್,ಡಿ.ಎಂ ಕಾರಂತ ಉಪಸ್ಥಿತರಿದ್ದರು.ನಿರ್ದೇಶಕ ಮಂಜುನಾಥ ಸ್ವಾಗತಿಸಿದರು.ಸಂಧ್ಯಾ ಕಾರಂತ ನಿರೂಪಿಸಿದರು.ಲೆಕ್ಕಿಗ ಶ್ರೀಕರ ಐತಾಳ್,ಸರೇಶ್ ಖಾರ್ವಿ ಸಹಕರಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…