ಕುಂದಾಪುರ

ಶ್ರೀಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಾಮಾನ್ಯ ಸಭೆನಿವ್ವಳ ಲಾಭಾ:7.19 ಲಕ್ಷ.ರೂ,ಶೇ.10 ಡಿವಿಡೆಂಡ್ ಘೋಷಣೆ

Share

ಹೊಸಾಡು:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ-ಹೊಸಾಡು ಅದರ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ ಹೊಸಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸರ್ವ ಸದಸ್ಯರ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಮುರಳೀಧರ್ ಐತಾಳ್ ಅವರು ಮಾತನಾಡಿ,ಸ್ವಚ್ಛ ಭಾರತ ಪರಿಕಲ್ಪನೆಯಡಿಯಲ್ಲಿ ಸ್ವಚ್ಛತಾ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಆಯೋಜನೆ ಮಾಡುವ ಕುರಿತು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು.ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗಾಗಿ,ಅಶಕ್ತರಿಗೆ ನೆರವು ವಿತರಣೆ ಮತ್ತು ವಿದ್ಯಾರ್ಥಿಗಳನ್ನು ಪ್ರೆÇೀತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದೆ.ನಿರ್ದೇಶಕರ ಮಂಡಳಿ ಮತ್ತು ಸದಸ್ಯರ ಸಹಕಾರ ದಿಂದ ಸಂಘವೂ ಆಡಿಟ್‍ನಲ್ಲಿ ಎ ಗ್ರೇಡ್ ಪಡೆದುಕೊಂಡಿದೆ.ಪ್ರಸ್ತುತ ಸಾಲಿನ ವರ್ಷದಲ್ಲಿ ಸಂಘವೂ 7.19 ಲಕ್ಷ.ರೂ ನಿವ್ವಳ ಲಾಭ ಗಳಿಸಿದ್ದು.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾವುದು ಎಂದು ಹೇಳಿದರು.
ಜ್ಯೋತಿ ಐತಾಳ್ ಅವರು ಹಿಂದಿನ ಸಾಲಿನ ವರದಿ ಮಂಡಿಸಿ ಒಪ್ಪಿಗೆ ಪಡೆದರು.ಸಿಇಒ ಅಶ್ವಿನಿ 2023-24ನೇ ಸಾಲಿನ ಆಯವ್ಯಯ ಹಾಗೂ ಆಡಳಿತ ವರದಿಯನ್ನು ವಾಚಿಸಿದರು.ಸಂಘದ ನಿರ್ದೇಶಕ ಶಾಂತರಾಮ ಭಟ್ಟ ನಿವ್ವಳ ಲಾಭದ ಹಂಚಿಕೆ ವರದಿಯನ್ನು ಮಂಡಿಸಿದರು.ನಿರ್ದೇಶಕ ಅಶೋಕ ಖಾರ್ವಿ ಅವರು ಮುಂದಿನ ಸಾಲಿನ ಕಾರ್ಯ ಯೋಜನೆಗಳ ಕುರಿತು ವರದಿ ಮಂಡಿಸಿ ಒಪ್ಪಿಗೆ ಪಡೆದುಕೊಂಡರು.ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಕೃಷಿಕರಾದ ಶ್ರೀ ಕೃಷ್ಣ ಕಾರಂತ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫರ್ನಾಂಡಿಸ್,ಉತ್ತಮ ಗ್ರಾಹಕರಾದ ರಾಘವೇಂದ್ರ ಶೆಟ್ಟಿ,ಅಶೋಕ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.ಸಂಘದ ಉಪಾಧ್ಯಕ್ಷ ರವೀಶ ಹೊಳ್ಳ ಮತ್ತು ಎಲ್ಲಾ ನಿರ್ದೇಶಕರು,ಸದಸ್ಯರು,ಸಲಹೆಗಾರರಾದ ವಿಶ್ವಂಭರ ಐತಾಳ್,ಡಿ.ಎಂ ಕಾರಂತ ಉಪಸ್ಥಿತರಿದ್ದರು.ನಿರ್ದೇಶಕ ಮಂಜುನಾಥ ಸ್ವಾಗತಿಸಿದರು.ಸಂಧ್ಯಾ ಕಾರಂತ ನಿರೂಪಿಸಿದರು.ಲೆಕ್ಕಿಗ ಶ್ರೀಕರ ಐತಾಳ್,ಸರೇಶ್ ಖಾರ್ವಿ ಸಹಕರಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago