ಹೊಸಾಡು ಸೇವಾ ಸಹಕಾರ ಸಂಘ ವಾರ್ಷಿಕ ಸಾಮಾನ್ಯ ಸಭೆ

Share

ಕುಂದಾಪುರ:ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಅದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು ಸಭಾಂಗಣದಲ್ಲಿ ಭಾನುವಾರ ನಡೆಯಿತು.
ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮಾತನಾಡಿ,ನಮ್ಮ ಸಂಘವು ನಿಮ್ಮೆಲ್ಲರ ಪೆÇ್ರೀತ್ಸಾಹದಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಮುಂದೆಯೂ ಕೂಡಾ ನಿಮ್ಮ ಸಹಕಾರ ಅಗತ್ಯವಾಗಿರುತ್ತದೆ ಎಂದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು.ಉಪಾಧ್ಯಕ್ಷ ಚಂದ್ರಶೇಖರ, ನಿರ್ದೇಶಕರಾದ ಸತೀಶ್ ಶೆಟ್ಟಿ,ದಿನೇಶ್ ಜೋಗಿ,ಶಶಿಧರ ಅಡಿಗ,ಪ್ರದೀಪ ಬಿಲ್ಲವ,ರಾಮ ಗಾಣಿಗ,ಶರತ್ ಶೆಟ್ಟಿ,ನವೀನ್ ಫೆನಾರ್ಂಡಿಸ್,ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು.ಸಿಬ್ಬಂದಿ ಶಿಲ್ಪಾ ಸ್ವಾಗತಿಸಿದರು.ಸಿಇಓ ನವೀನ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ರೇಖಾ ಪುತ್ರನ್ ವಂದಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page