ಕುಂದಾಪುರ

ಮರವಂತೆ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

Share

ಬೈಂದೂರು:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಾವುಂದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಅವರು ಮಾತನಾಡಿ,ಸಂಘದ ಆರ್ಥಿಕ ಚಟುವಟಿಕೆ ಮತ್ತು ಬೆಳವಣಿಗೆಯ ಅಭಿವೃದ್ಧಿ ಕುರಿತು ವಾರ್ಷಿಕ ವರದಿಯನ್ನು ಮಂಡಿಸಿದರು.ಹಿಂದಿನ ಮಹಾಸಭೆ ನಡವಳಿಕೆಯನ್ನು ಓದಿ ಹೇಳಿದರು.
ಸಂಘದ ಲೆಕ್ಕಿಗ ರೇಖಾ ಅವರು ನಿವ್ವಳ ಲಾಭದ ವಿಂಗಡಣೆ ಮತ್ತು ಮುಂದಿನ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿ ಬಜೆಟ್ ಮಂಜೂರಾತಿಯನ್ನು ಮಂಡಿಸಿ ಸದಸ್ಯರಿಂದ ಒಪ್ಪಿಗೆ ಪಡೆದು ಕೊಂಡರು.
ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಸಂಘದ ಲಾಭಾಂಶ,ದೀರ್ಘಾವಧಿ ಗೃಹಸಾಲ ಚಿನ್ನಾಭರಣ ಸಾಲ ಹಾಗೂ ಮುಂದಿನ ಯೋಜನೆಗಳ ಕುರಿತು ವಿವರಿಸಿದರು.
ಸಂಘದ ಉಪಾಧ್ಯಕ್ಷೆ ಪೂರ್ಣಿಮಾ ಮೊಗವೀರ ನಾವುಂದ,ನಿರ್ದೇಶಕರುಗಳಾದ ಶೈಲಾ ಖಾರ್ವಿ ಮರವಂತೆ,ಗಿರಿಜ ಖಾರ್ವಿ ಮರವಂತೆ,ಆಶಾ ಉಳ್ಳೂರು,ಸುಜಾತ ಪೂಜಾರಿ ನಾವುಂದ,ಸೀತಾ ಖಾರ್ವಿ ಮರವಂತೆ,ಮುಕಾಂಬು ಖಾರ್ವಿ ಬಡಾಕೆರೆ,ನಬಿಸಾ ನಾವುಂದ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಾಹಕ ಶ್ರೀನಿವಾಸ ಅಡಿಗ ಸ್ವಾಗತಿಸಿದರು.ಕು.ಛಾಯ ಪ್ರಾರ್ಥಿಸಿದರು.ಹರ್ಷ ವಂದಿಸಿದರು.
ಸುಮಾರು 950 ಕ್ಕೂ ಮಿಕ್ಕಿ ಸದಸ್ಯರು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ವರದಿ:ಜಗದೀಶ ದೇವಾಡಿಗ, ನಿಮ್ಮ ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ:9916284048

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago