ಕುಂದಾಪುರ

ಬುಲ್ ಟ್ರಾಲ್ ಫಿಶಿಂಗ್ ಬೋಟ್ ಅಡ್ಡಗಟ್ಟಿದ ಮೀನುಗಾರರು

Share

ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.
ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ
ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.
ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಡದೋಣಿ ಮೀನುಗಾರರು ಒತ್ತಾಯಿಸಿದ್ದಾರೆ.
ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಬುಲ್
ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 2 9 ಲಾಂಗ್‌ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ದೃಶ್ಯಗಳು ಕಂಡು ಬಂದ್ದಿದ್ದು ನಾಡದೋಣಿ ಯುವರು ಇದನ್ನು ಪ್ರತಿಭಟಿಸಿದ್ದಾರೆ.ಅಧಿಕಾರಿಗಳ ಗಮನಕ್ಕೆ ತಂದರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಹೀಗೆ ಮುಂದುವರೆದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವದರಲ್ಲಿ ಸಂಶಯವಿಲ್ಲ ಇದೊಂದು ಅವೈಜ್ಞಾನಿಕ ಮೀನುಗಾರಿಕೆ
ಲೈಟ್‌ ಫಿಶಿಂಗ್‌,ಬುಲ್‌ ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್‌ ಮಾಡುವಂತಿಲ್ಲ.ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್‌ ರದ್ಧತಿ,ದಂಡ ವಿಧಿಸುವುದರ ಮುಖಾಂತರ ಕಠಿಣ ಕ್ರಮ ಸಂಬಂಧಪಟ್ಟ ಇಲಾಖೆ ಕೈಗೊಳ್ಳಬೇಕು.ಈ ರೀತಿ ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮಾಡುವುದನ್ನು ಕಂಡು ಬಂದಲ್ಲಿ ಇದರಿಂದ ಬುಲ್ಟ್ರೋಲ್ ನವರಿಗೂ ಮತ್ತು ನಾಡ ದೋಣಿ ಮೀನುಗಾರರು ಸಂಘರ್ಷಕ್ಕೆ ಕಾರಣವಾಗುತ್ತದೆ ‌ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್ಟ್ರಾಲ್ ಬೋಟ್ ನವರಿಗೂ ಘರ್ಷಣೆ ಉಂಟಾಗುವ ಸಂಭವವಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಚಿವರು ಮತ್ತು ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಡದೋಣಿ ಮೀನುಗಾರರು ಅಗ್ರಹಿಸಿದ್ದಾರೆ ಮತ್ತುಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ
ಹೋರಾಟ ಮಾಡುತ್ತೇವೆ. ಎಂದು ಮೂರು ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ಎಚ್ಚರಿಕೆ ನೀಡಿರುತ್ತಾರೆ
ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್, ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ, ರಾಣೆಬಲೆ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago