ಕುಂದಾಪುರ

ಬುಲ್ ಟ್ರಾಲ್ ಫಿಶಿಂಗ್ ಬೋಟ್ ಅಡ್ಡಗಟ್ಟಿದ ಮೀನುಗಾರರು

Share

Advertisement
Advertisement
Advertisement

ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.
ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ
ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.
ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಡದೋಣಿ ಮೀನುಗಾರರು ಒತ್ತಾಯಿಸಿದ್ದಾರೆ.
ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಬುಲ್
ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 2 9 ಲಾಂಗ್‌ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ದೃಶ್ಯಗಳು ಕಂಡು ಬಂದ್ದಿದ್ದು ನಾಡದೋಣಿ ಯುವರು ಇದನ್ನು ಪ್ರತಿಭಟಿಸಿದ್ದಾರೆ.ಅಧಿಕಾರಿಗಳ ಗಮನಕ್ಕೆ ತಂದರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಹೀಗೆ ಮುಂದುವರೆದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವದರಲ್ಲಿ ಸಂಶಯವಿಲ್ಲ ಇದೊಂದು ಅವೈಜ್ಞಾನಿಕ ಮೀನುಗಾರಿಕೆ
ಲೈಟ್‌ ಫಿಶಿಂಗ್‌,ಬುಲ್‌ ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್‌ ಮಾಡುವಂತಿಲ್ಲ.ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್‌ ರದ್ಧತಿ,ದಂಡ ವಿಧಿಸುವುದರ ಮುಖಾಂತರ ಕಠಿಣ ಕ್ರಮ ಸಂಬಂಧಪಟ್ಟ ಇಲಾಖೆ ಕೈಗೊಳ್ಳಬೇಕು.ಈ ರೀತಿ ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮಾಡುವುದನ್ನು ಕಂಡು ಬಂದಲ್ಲಿ ಇದರಿಂದ ಬುಲ್ಟ್ರೋಲ್ ನವರಿಗೂ ಮತ್ತು ನಾಡ ದೋಣಿ ಮೀನುಗಾರರು ಸಂಘರ್ಷಕ್ಕೆ ಕಾರಣವಾಗುತ್ತದೆ ‌ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್ಟ್ರಾಲ್ ಬೋಟ್ ನವರಿಗೂ ಘರ್ಷಣೆ ಉಂಟಾಗುವ ಸಂಭವವಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಚಿವರು ಮತ್ತು ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಡದೋಣಿ ಮೀನುಗಾರರು ಅಗ್ರಹಿಸಿದ್ದಾರೆ ಮತ್ತುಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ
ಹೋರಾಟ ಮಾಡುತ್ತೇವೆ. ಎಂದು ಮೂರು ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ಎಚ್ಚರಿಕೆ ನೀಡಿರುತ್ತಾರೆ
ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್, ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ, ರಾಣೆಬಲೆ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago