ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.
ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ
ಬುಲ್ಟ್ರಾಲ್ ಲೈಟ್ ಫಿಶಿಂಗ್ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.
ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಡದೋಣಿ ಮೀನುಗಾರರು ಒತ್ತಾಯಿಸಿದ್ದಾರೆ.
ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಬುಲ್
ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 2 9 ಲಾಂಗ್ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ದೃಶ್ಯಗಳು ಕಂಡು ಬಂದ್ದಿದ್ದು ನಾಡದೋಣಿ ಯುವರು ಇದನ್ನು ಪ್ರತಿಭಟಿಸಿದ್ದಾರೆ.ಅಧಿಕಾರಿಗಳ ಗಮನಕ್ಕೆ ತಂದರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಹೀಗೆ ಮುಂದುವರೆದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವದರಲ್ಲಿ ಸಂಶಯವಿಲ್ಲ ಇದೊಂದು ಅವೈಜ್ಞಾನಿಕ ಮೀನುಗಾರಿಕೆ
ಲೈಟ್ ಫಿಶಿಂಗ್,ಬುಲ್ ಟ್ರಾಲ್ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್ ಮಾಡುವಂತಿಲ್ಲ.ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್ ರದ್ಧತಿ,ದಂಡ ವಿಧಿಸುವುದರ ಮುಖಾಂತರ ಕಠಿಣ ಕ್ರಮ ಸಂಬಂಧಪಟ್ಟ ಇಲಾಖೆ ಕೈಗೊಳ್ಳಬೇಕು.ಈ ರೀತಿ ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮಾಡುವುದನ್ನು ಕಂಡು ಬಂದಲ್ಲಿ ಇದರಿಂದ ಬುಲ್ಟ್ರೋಲ್ ನವರಿಗೂ ಮತ್ತು ನಾಡ ದೋಣಿ ಮೀನುಗಾರರು ಸಂಘರ್ಷಕ್ಕೆ ಕಾರಣವಾಗುತ್ತದೆ ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್ಟ್ರಾಲ್ ಬೋಟ್ ನವರಿಗೂ ಘರ್ಷಣೆ ಉಂಟಾಗುವ ಸಂಭವವಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಚಿವರು ಮತ್ತು ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಡದೋಣಿ ಮೀನುಗಾರರು ಅಗ್ರಹಿಸಿದ್ದಾರೆ ಮತ್ತುಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ
ಹೋರಾಟ ಮಾಡುತ್ತೇವೆ. ಎಂದು ಮೂರು ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ಎಚ್ಚರಿಕೆ ನೀಡಿರುತ್ತಾರೆ
ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್, ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ, ರಾಣೆಬಲೆ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…