ಕುಂದಾಪುರ:ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ನಿನ್ನೆ ಶನಿವಾರ ನಿಧನ ಹೊಂದಿದರು.
ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ,ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು.ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು.ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಂಡ ಇವರ ಯಕ್ಷಪಯಣ ಮುಂದೆ ಹವ್ಯಾಸಿ ಸಂಘಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…