ಶಾಲಾ ವಾಹನ ಬೈಕ್ ಗೆ ಡಿಕ್ಕಿ:ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Share

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಸಮೀಪ ಬಡಾಕೇರಿ ಮುಖ್ಯರಸ್ತೆಯಲ್ಲಿ ಕುಂದಾಪುರ ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಶಾಲಾ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬಸ್ಸಿನ ಚಕ್ರದಡಿಗೆ ಸಿಲುಕಿ ಕೊಂಡಿದ್ದು ಸಂಪೂರ್ಣ ಹಾನಿಯಾಗಿದೆ.ಬೈಕ್ ಸವಾರ ನಾಗೇಶ್ ಮೊಗವೀರ (34) ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ಹಾರಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಮಧ್ಯಾಹ್ನದ ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಕರೆತರುವ ಸಮಯದಲ್ಲಿ ನಾವುಂದ ಸಮೀಪ ಬಡಾಕೆರೆಯಲ್ಲಿ ಬೈಕ್ ಡಿಕ್ಕಿ ಹೊಡೆದಿದೆ.ಶಾಲಾ ವಾಹನ ಚಾಲಕನ ಅಜಾಗರುಕತೆ ಯಿಂದ ಇವೊಂದು ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.ಬಸ್ಸಿನ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ಹಾನಿ ಗೊಂಡಿದೆ.
ಮಕ್ಕಳಿಗೆ ಯಾವುದೇ ತೊಂದರೆ ರೀತಿಯಲ್ಲಿ ತೊಂದರೆ ಉಂಟಾಗಿಲ್ಲ,ಗಾಯಗೊಂಡಿದ್ದ ಬೈಕ್ ಸವಾರರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವರದಿ:ಜಗದೀಶ ದೇವಾಡಿಗ

Advertisement

Share

Leave a comment

Your email address will not be published. Required fields are marked *

You cannot copy content of this page