ಬೈಂದೂರು:ಕೆರೆಗೆ ಈಜಲೆಂದು ತೆರಳಿದ ಬೈಂದೂರು ತಾಲೂಕಿನ ಯೋಜನಾ ನಗರದ ನಿವಾಸಿ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಹತ್ತಿರದ ನಿವಾಸಿ ಶಾನು ಮೊಹ್ಮದ್ ಶಫಾನ್ (13) ಎಂಬ ವಿದ್ಯಾರ್ಥಿಗಳಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಪರೀಕ್ಷೆ ಮುಗಿಸಿ ಕೊಂಡು ಶಾಲೆಯಿಂದ ಮನೆಗೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ಬೈಂದೂರು ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ.ಅಷ್ಟೇನು ಈಜಲು ಬಾರದ ಯುವಕರಿಬ್ಬರು ಆಯತಪ್ಪಿ ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತಪಟ್ಟಿದ್ದಾರೆ.ಸಂಚೆ ತನಕವೂ ಮಕ್ಕಳು ಮನೆ ಬಾರದೆ ಇರುವುದನ್ನು ಗಮನಿಸಿದ ಹೆತ್ತವರು, ಬೈಂದೂರು ಠಾಣೆಗೆ ದೂರು ನೀಡಿದ್ದರು.ಹುಡುಕಾಟ ನಡೆಸಿದ ಸಮಯದಲ್ಲಿ ಕೆರೆಯಲ್ಲಿ ವಿದ್ಯಾರ್ಥಿಗಳ ಮೃತ ಶರೀರ ಪತ್ತೆ ಆಗಿದೆ.ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…