ಕುಂದಾಪುರ

ಗಂಗೊಳ್ಳಿ ಮೂಲದ ವ್ಯಕ್ತಿ:ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

Share

Advertisement
Advertisement

ಕುಂದಾಪುರ:ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಎಂಬುವರ ಪುತ್ರ ಮುಬಾಶೀರ್ ಬಷೀರ್ (30) ಸೌದಿ ಅರೇಬಿಯಾದಲ್ಲಿ ಹೃದಯಾಘಾತ ದಿಂದ ಬುಧವಾರ ನಿಧನ ಹೊಂದಿದ್ದಾರೆ.
ಸೌದಿಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಹಾಗೂ ಮೃತರ ಕುಟುಂಬಸ್ಥರು ಸಾವಿನ ಸುದ್ದಿಯನ್ನು ದೃಢಪಡಿಸಿದ್ದಾರೆ.
ಎರಡು ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿ ಯಲ್ಲಿ ಉದ್ಯೋಗದಲ್ಲಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ಹೆಚ್ ಎಂ ಎಂ ಶಾಲೆ,ಪ್ರೌಡ ಶಿಕ್ಷಣವನ್ನು ವಿ.ಕೆ ಆರ್ ಆಂಗ್ಲ ಮಾಧ್ಯಮ ಶಾಲೆ, ಪಿ ಯು ಶಿಕ್ಷಣವನ್ನು ಭಂಡರ್ಕಾರ್ಸ್ ಕಾಲೇಜು, ತದನಂತರ ಇಂಜಿನಿಯರಿಂಗ್ ಪದವಿಯನ್ನು ಭಟ್ಕಳದ ಅಂಜುಮನ್ ಕಾಲೇಜು ಹಾಗೂ ಚೆನ್ನೈ ಯ ಕಾಲೇಜಿನಲ್ಲಿ ಮಾಡಿದ್ದರು.
ಊರಿನಲ್ಲಿದ್ದಾಗ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದ ಅವರು 4 ವರುಷಗಳ ಹಿಂದೆ ತ್ರಾಸಿ ಮರವಂತೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಮೂಲದ ಬಾಲಕನ ಅಂತ್ಯಸಂಸ್ಕಾರದ ಕಾರ್ಯವನ್ನು, ವಿಧಿವಿಧಾನಗಳನ್ನು ಗಂಗೊಳ್ಳಿಯ ತನ್ನ ಮನೆಯಲ್ಲಿಯೇ ನೇರವೇರಿಸಲು ಅವಕಾಶ ಮಾಡಿ ಕೊಟ್ಟಿದ್ದಲ್ಲದೆ, ಗಾಯಾಳು ಒರ್ವರ ಆಸ್ಪತ್ರೆ ವೆಚ್ಚವನ್ನು ತಾನೇ ಭರಿಸಿದ್ದರು. ಕಷ್ಟದಲ್ಲಿ ಇದ್ದಾಗ ಸಹಾಯ ಮಾಡುವುದಲ್ಲದೇ,ತುರ್ತು ಸಂದರ್ಭ ಹೆಗಲಿಗೆ ಹೆಗಲು ಕೊಡುತ್ತಿದ್ದ ಅವರು.ಕೆಲ ಸಮಯದ ಹಿಂದೆ ಉದ್ಯೋಗಕ್ಕಾಗಿ ಸೌದಿಗೆ ತೆರಳಿದ್ದರು.ಅವರು ಪತ್ನಿ, ತಾಯಿ,ತಂದೆ ಹಾಗೂ ಓರ್ವ ಸಹೋದರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನೂ ಕ್ರಮಗಳ ನಂತರವೇ ತಿಳಿದು ಬರಲಿದೆ.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

16 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago