ಕುಂದಾಪುರ:ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಎಂಬುವರ ಪುತ್ರ ಮುಬಾಶೀರ್ ಬಷೀರ್ (30) ಸೌದಿ ಅರೇಬಿಯಾದಲ್ಲಿ ಹೃದಯಾಘಾತ ದಿಂದ ಬುಧವಾರ ನಿಧನ ಹೊಂದಿದ್ದಾರೆ.
ಸೌದಿಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಹಾಗೂ ಮೃತರ ಕುಟುಂಬಸ್ಥರು ಸಾವಿನ ಸುದ್ದಿಯನ್ನು ದೃಢಪಡಿಸಿದ್ದಾರೆ.
ಎರಡು ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿ ಯಲ್ಲಿ ಉದ್ಯೋಗದಲ್ಲಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ಹೆಚ್ ಎಂ ಎಂ ಶಾಲೆ,ಪ್ರೌಡ ಶಿಕ್ಷಣವನ್ನು ವಿ.ಕೆ ಆರ್ ಆಂಗ್ಲ ಮಾಧ್ಯಮ ಶಾಲೆ, ಪಿ ಯು ಶಿಕ್ಷಣವನ್ನು ಭಂಡರ್ಕಾರ್ಸ್ ಕಾಲೇಜು, ತದನಂತರ ಇಂಜಿನಿಯರಿಂಗ್ ಪದವಿಯನ್ನು ಭಟ್ಕಳದ ಅಂಜುಮನ್ ಕಾಲೇಜು ಹಾಗೂ ಚೆನ್ನೈ ಯ ಕಾಲೇಜಿನಲ್ಲಿ ಮಾಡಿದ್ದರು.
ಊರಿನಲ್ಲಿದ್ದಾಗ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದ ಅವರು 4 ವರುಷಗಳ ಹಿಂದೆ ತ್ರಾಸಿ ಮರವಂತೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಮೂಲದ ಬಾಲಕನ ಅಂತ್ಯಸಂಸ್ಕಾರದ ಕಾರ್ಯವನ್ನು, ವಿಧಿವಿಧಾನಗಳನ್ನು ಗಂಗೊಳ್ಳಿಯ ತನ್ನ ಮನೆಯಲ್ಲಿಯೇ ನೇರವೇರಿಸಲು ಅವಕಾಶ ಮಾಡಿ ಕೊಟ್ಟಿದ್ದಲ್ಲದೆ, ಗಾಯಾಳು ಒರ್ವರ ಆಸ್ಪತ್ರೆ ವೆಚ್ಚವನ್ನು ತಾನೇ ಭರಿಸಿದ್ದರು. ಕಷ್ಟದಲ್ಲಿ ಇದ್ದಾಗ ಸಹಾಯ ಮಾಡುವುದಲ್ಲದೇ,ತುರ್ತು ಸಂದರ್ಭ ಹೆಗಲಿಗೆ ಹೆಗಲು ಕೊಡುತ್ತಿದ್ದ ಅವರು.ಕೆಲ ಸಮಯದ ಹಿಂದೆ ಉದ್ಯೋಗಕ್ಕಾಗಿ ಸೌದಿಗೆ ತೆರಳಿದ್ದರು.ಅವರು ಪತ್ನಿ, ತಾಯಿ,ತಂದೆ ಹಾಗೂ ಓರ್ವ ಸಹೋದರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನೂ ಕ್ರಮಗಳ ನಂತರವೇ ತಿಳಿದು ಬರಲಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…