ಕುಂದಾಪುರ

ಗಂಗೊಳ್ಳಿ ಮೂಲದ ವ್ಯಕ್ತಿ:ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

Share

ಕುಂದಾಪುರ:ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಎಂಬುವರ ಪುತ್ರ ಮುಬಾಶೀರ್ ಬಷೀರ್ (30) ಸೌದಿ ಅರೇಬಿಯಾದಲ್ಲಿ ಹೃದಯಾಘಾತ ದಿಂದ ಬುಧವಾರ ನಿಧನ ಹೊಂದಿದ್ದಾರೆ.
ಸೌದಿಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಹಾಗೂ ಮೃತರ ಕುಟುಂಬಸ್ಥರು ಸಾವಿನ ಸುದ್ದಿಯನ್ನು ದೃಢಪಡಿಸಿದ್ದಾರೆ.
ಎರಡು ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿ ಯಲ್ಲಿ ಉದ್ಯೋಗದಲ್ಲಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ಹೆಚ್ ಎಂ ಎಂ ಶಾಲೆ,ಪ್ರೌಡ ಶಿಕ್ಷಣವನ್ನು ವಿ.ಕೆ ಆರ್ ಆಂಗ್ಲ ಮಾಧ್ಯಮ ಶಾಲೆ, ಪಿ ಯು ಶಿಕ್ಷಣವನ್ನು ಭಂಡರ್ಕಾರ್ಸ್ ಕಾಲೇಜು, ತದನಂತರ ಇಂಜಿನಿಯರಿಂಗ್ ಪದವಿಯನ್ನು ಭಟ್ಕಳದ ಅಂಜುಮನ್ ಕಾಲೇಜು ಹಾಗೂ ಚೆನ್ನೈ ಯ ಕಾಲೇಜಿನಲ್ಲಿ ಮಾಡಿದ್ದರು.
ಊರಿನಲ್ಲಿದ್ದಾಗ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದ ಅವರು 4 ವರುಷಗಳ ಹಿಂದೆ ತ್ರಾಸಿ ಮರವಂತೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಮೂಲದ ಬಾಲಕನ ಅಂತ್ಯಸಂಸ್ಕಾರದ ಕಾರ್ಯವನ್ನು, ವಿಧಿವಿಧಾನಗಳನ್ನು ಗಂಗೊಳ್ಳಿಯ ತನ್ನ ಮನೆಯಲ್ಲಿಯೇ ನೇರವೇರಿಸಲು ಅವಕಾಶ ಮಾಡಿ ಕೊಟ್ಟಿದ್ದಲ್ಲದೆ, ಗಾಯಾಳು ಒರ್ವರ ಆಸ್ಪತ್ರೆ ವೆಚ್ಚವನ್ನು ತಾನೇ ಭರಿಸಿದ್ದರು. ಕಷ್ಟದಲ್ಲಿ ಇದ್ದಾಗ ಸಹಾಯ ಮಾಡುವುದಲ್ಲದೇ,ತುರ್ತು ಸಂದರ್ಭ ಹೆಗಲಿಗೆ ಹೆಗಲು ಕೊಡುತ್ತಿದ್ದ ಅವರು.ಕೆಲ ಸಮಯದ ಹಿಂದೆ ಉದ್ಯೋಗಕ್ಕಾಗಿ ಸೌದಿಗೆ ತೆರಳಿದ್ದರು.ಅವರು ಪತ್ನಿ, ತಾಯಿ,ತಂದೆ ಹಾಗೂ ಓರ್ವ ಸಹೋದರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನೂ ಕ್ರಮಗಳ ನಂತರವೇ ತಿಳಿದು ಬರಲಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago