ಕುಂದಾಪುರ

*ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ -ಶಾಸಕ ಗುರುರಾಜ್ ಗಂಟಿಹೊಳೆ ಗ್ರಾಮಸ್ಥರೊಂದಿಗೆ ಮಾತುಕತೆ

Share

ಕುಂದಾಪುರ:ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್, ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ,ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ.ಜೊತೆಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಮೊದಲ ಹೋರಾಟಕ್ಕೆ ಮುನ್ನುಡಿ ಬರೆದಂತಾಗಿದೆ.ಈ ಪ್ರತಿಭಟನೆ ಕಿಚ್ಚು ಇಡೀ ಉಡುಪಿ ಜಿಲ್ಲೆಗೆ ಪಸರಿಸಿ.ಒಂದು ಜನಂದೋಲನವಾಗಿ ಪರಿವರ್ತನೆಗೊಂಡಾಗ ನಮ್ಮ ಹೋರಾಟಕ್ಕೆ ನಿಶ್ಚಿತವಾಗಿ ಫಲ ದೊರೆಯಲಿದೆ.ಈ ಹೋರಾಟದ ನಮ್ಮೆಲ್ಲರ ಹೋರಾಟವಾಗಬೇಕಿದೆ. ಯಾವುದೇ ಮಟ್ಟದ ಹೋರಾಟಕ್ಕೆ ಎಲ್ಲಿಗೆ ಕರೆದರೂ ನಿಮ್ಮ ಜೊತೆಗಿದ್ದೇನೆ ಎನ್ನುವ ಭರವಸೆ ನೀಡಿದರು.
ಪ್ರತಿಭಟನೆಗೆ ಒಂದು ವಿಶೇಷ ಶಕ್ತಿ ಇದೆ.ಪಕ್ಷಾತೀತವಾಗಿ ಆರಂಭಗೊಂಡ ಈ ಹೋರಾಟ ಇತರ ಗ್ರಾಮದ ಜನರಿಗೂ ಮಾದರಿಯಾಗಲಿದೆ ಎಂದವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಪರಿಸರ ಸೂಕ್ಷ್ಮ ಪ್ರದೇಶವೂ ಜನವಸತಿ ಪ್ರದೇಶದಿಂದ ಹೊರಗಿರಬೇಕು. ಕಾಡಿನ ಒಳಗೆ ಹಲವಾರು ವರ್ಷ ದಿಂದ ವಾಸವಾಗಿರುವ ಕುಟುಂಬಕ್ಕೆ, ಕೃಷಿ ಜಾಗಕ್ಕೆ ಸರಿಯಾದ ಪರಿಹಾರ ಕೊಡಬೇಕು.ಸೂಕ್ಷ್ಮ ವಲಯ ವನ್ನು ಜೀರೋ ಮಾಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಶಾಸಕರ ಮುಂದಿಡಲಾಯಿತು.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

12 hours ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

21 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago