ಕುಂದಾಪುರ

ಕಸ್ತೂರಿ ರಂಗನ್ ವರದಿ ಜಾರಿ ಗುಮ್ಮ:ಹಳ್ಳಿಹೊಳೆ ಗ್ರಾಮಸ್ಥರಿಂದ ಭಾರಿ ವಿರೋಧ

Share

Advertisement
Advertisement

ಕುಂದಾಪುರ:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಸುನಂದಾ ಗೇರು ಬೀಜ ಕಾರ್ಖಾನೆ ಸುಳುಗೋಡು ಚಕ್ರ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದ ಹೋರಾಟಗಾರ ಬೆಳ್ತಂಗಡಿಯ ಫಾ| ಡಾ| ಸಲೀನ್ ಜೋಸೆಫ್‌ ,ಪರಿಸರ ಸಂರಕ್ಷಣೆ ಉದ್ದೇಶದಿಂದ ಸುಪ್ರೀಂ ನಿರ್ದೇಶನದಂತೆ ಕಸ್ತೂರಿ ರಂಗನ್ ವರದಿ ಜಾರಿ ಸೂಚನೆಗಳು ಬಂದಿವೆ.ಈ ವರದಿಯಲ್ಲಿ ಜನ ವಸತಿ ಪ್ರದೇಶಗಳನ್ನು ಸಹ ಪರಿಸರ ಸೂಕ್ಷ್ಮ ವಲಯ ಎಂದು ಸೇರಿಸಿರುವುದು ದುರಂತ. ಇದರ ವಿರುದ್ಧ ಇನ್ನು ಜನರೇ ಧ್ವನಿ ಎತ್ತಬೇಕಿದೆ.ಉಡುಪಿ ಜಿಲ್ಲೆಯ ಸುಮಾರು 35 ಗ್ರಾಮಗಳ ಗ್ರಾಮಸ್ಥರು ಸಹ ಒಗ್ಗೂಡಿ ಹೋರಾಡದಿದ್ದರೆ ಕಾಡಂಚಿನಲ್ಲಿ ವಾಸಿಸುತ್ತಿರುವವರ ಬದುಕು ಶೋಚನೀಯವಾಗಲಿದೆ ಎಂದು ಎಚ್ಚರಿಸಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ,ಜನರ ಉಳಿವಿಗಾಗಿ ಹೋರಾಡಲು ಸದಾ ಸಿದ್ಧ.ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೇಗೆ ಹೋರಾಡಬೇಕು ಎನ್ನುವ ಬಗ್ಗೆ ಆದಷ್ಟು ಬೇಗ ಸಂಘಟಿತರಾಗಬೇಕಿದೆ. ಅರಣ್ಯ,ಪರಿಸರ ಸಂರಕ್ಷಣೆಗೆ ನಮ್ಮ ಬೆಂಬಲವಿದೆ.ಹಾಗಂತ ಬದುಕು ಕಟ್ಟಿಕೊಂಡಿರುವವರಿಗೆ ತೊಂದರೆ ಕೊಡುವುದು ಸರಿಯಲ್ಲ.ಈ ನೆಲೆಯಲ್ಲಿ ಪಕ್ಷಾತೀತ ಬೆಂಬಲವಿದೆ. ಕೇರಳದಲ್ಲಿ ಮನುಷ್ಯರೇ(ಫಿಸಿಕಲ್) ಸರ್ವೇ ನಡೆಸಿದ್ದಾರೆ.ಆದರೆ ಇಲ್ಲಿ ಸ್ಯಾಟಲೈಟ್ ಸರ್ವೇಯಿಂದ ಜನ ವಸತಿ ಪ್ರದೇಶಗಳು ಸೇರಿಕೊಂಡಿವೆ.ಇಲ್ಲಿಯೂ ಫಿಸಿಕಲ್ ಸರ್ವೇ ಆಗಲಿ ಎಂದು ಒತ್ತಾಯಿಸಿದರು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ,ಈ ವರದಿ ಜಾರಿಯಾದರೆ ಕಾಡಂಚಿನ ಗ್ರಾಮಗಳಲ್ಲಿ ನೆಲೆಸಿರುವ ಸಾವಿರಾರು ಕುಟುಂಬಗಳಿಗೆ ಎಲ್ಲದಕ್ಕೂ ಸಮಸ್ಯೆಯಾಗಲಿದೆ. ಜನರಿಗೆ ಮಾತ್ರವಲ್ಲ,ಕೆಲ ಗ್ರಾಮಗಳ ಸರಕಾರಿ ಕಟ್ಟಡಗಳು ಅದೇ ವಲಯದಲ್ಲಿವೆ.ನಮ್ಮ ಹಕ್ಕನ್ನು ಕಸಿಯಲು ನಾವು ಬಿಡಬಾರದು.ಈ ನೆಲೆಯಲ್ಲಿ ಒಗ್ಗೂಡಿ ಹೋರಾಡಬೇಕು. ರಾಜ್ಯದಿಂದ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆರಳಿ ಮನವಿ ಮಾಡುವ ಅಗತ್ಯವಿದೆ. ಜನರೆಲ್ಲ ಒಗ್ಗೂಡಿ ವಿಧಾನಸೌಧದ ಎದುರು ಧರಣಿ ಮಾಡಬೇಕಾಗಿದೆ ಎಂದರು.
ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಅಧ್ಯಕ್ಷತೆ ಕ್ಷತೆ ವಹಿಸಿದ್ದರು.
ಮುದೂರು ಹಿತರಕ್ಷಣಾ ಸಮಿತಿ ಅಧ್ಯಕ್ಷ ಲಕ್ಷ್ಮಲ ಶೆಟ್ಟಿ,ವಂಡ್ಸೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ. ಅತುಲ್ ಕುಮಾರ್ ಶೆಟ್ಟಿ, ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಸದಸ್ಯರಾದ ಪ್ರಭಾಕರ ನಾಯ್ಕ,ಗುಲಾಬಿ, ನೇತ್ರಾವತಿ,ಗಿರಿಜಾ,ದಿನೇಶ್ ನಾಯ್ಕ್ ಉಪಸ್ಥಿತರಿದ್ದರು.
ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ಕೃಷ್ಣ ಚಾತ್ರ ಸ್ವಾಗತಿಸಿದರು.ಜಡ್ಕಲ್ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವದಾಸ್ ವಿ.ಜೆ. ಪ್ರಾಸ್ತಾವಿಕ ಮಾತನಾಡಿದರು. ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಸದಸ್ಯ ಪ್ರದೀಪ್ ಕೊಠಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

20 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago