ಕುಂದಾಪುರ

ಶ್ರೀ ಮಹಿಷಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು,ನಾ ರಾತ್ರಿ ಮಹೋತ್ಸವ ಸಂಭ್ರಮ

Share

Advertisement
Advertisement

ಕುಂದಾಪುರ:ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಚಂಡಿಕಾ ಹೋಮ,ದುರ್ಗಾ ಹೋಮ ಮತ್ತು ವಿಶೇಷ ಪೂಜೆ ಜರುಗಲಿದೆ.ಸಂಜೆ 5 ರಿಂದ ಶ್ರೀ ದೇವಿಯ ಕಲ್ಪೋಕ್ತ ಪೂಜೆ,ಸಹಸ್ರ ನಾಮಾರ್ಚನೆ,ಚಂಡಿಕಾ ಸಪ್ತಶತಿ ಪಾರಾಯಣ ಸೇವೆ ನಡೆಯಲಿದ್ದು ಸಂಜೆ 6 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.ಪ್ರತಿದಿನ ರಾತ್ರಿ 9 ರಿಂದ ಅನ್ನದಾನ ಸೇವೆ ಹಾಗೂ ಅಕ್ಟೋಬರ್ 12 ರಿಂದ ವಿಜಯ ದಶಮಿ ಕಾರ್ಯಕ್ರಮದೊಂದಿಗೆ ನವರಾತ್ರಿ ಉತ್ಸವ ಸಂಪನ್ನ ಗೊಳ್ಳಲಿದೆ ಎಂದು ದೇವಳದ ಆಡಳಿತ ಸಮಿತಿ ತಿಳಿಸಿದೆ.ದೇವತಾ ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿ ಕೊಂಡಿದೆ.
ದೇವಸ್ಥಾನದ ಅಧ್ಯಕ್ಷರಾದ ಡಿ ಶಿವರಾಮ ಶೆಟ್ಟಿ ದೇವಲ್ಕುಂದ ಮಾತನಾಡಿ,400 ವರ್ಷಗಳಷ್ಟು ಇತಿಹಾಸವನ್ನು ಹೊಂದಿರುವ ಶ್ರೀ ಮಹಿಷ ಮರ್ದಿನಿ ದೇವಸ್ಥಾನವು ಬಹಳಷ್ಟು ಕಾರಣಿಕ ಶಕ್ತಿಯನ್ನು ಹೊಂದಿರುವ ಸಾನಿಧ್ಯವಾಗಿದೆ.ಭ್ತಕ್ತರ ಸಹಕಾರ ದಿಂದ ಕಳೆದ ಮೂರು ವರ್ಷಗಳ ಹಿಂದೆ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು.ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಪ್ರವೀಣ ಶೆಟ್ಟಿ ಮಾತನಾಡಿ,ಕಷ್ಟ ಎಂದು ಬೇಡಿ ಬಂದವರ ಸಂಕಷ್ಟವನ್ನು ನಿವಾರಿಸುವ ಮಹಿಷಮರ್ದಿನಿ ದೇವಿಯ ಶಕ್ತಿಯ ಅಪಾರವಾದದ್ದು ಕ್ಷೇತ್ರದ ಬಗ್ಗೆ ತಿಳಿಸಿದರು.
ಕಾರ್ಯದರ್ಶಿ ರಾಜೀವ ಶೆಟ್ಟಿ ಸುಣ್ಣದಗುಂಡಿ ಮಾತನಾಡಿ,ಹೊಸೂರು ಕಾನ್ನಬೇರು ದೇವಸ್ಥಾನದಲ್ಲಿ ಹತ್ತು ದಿನಗಳ ಕಾಲ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು,ಗ್ರಾಮಸ್ಥರು ಭಾಗಿ ಆಗಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿ ಕೊಂಡರು.
ಸೇವಾಕರ್ತರಾದ ನಾಗರತ್ನ ನಸರಸಿಂಹ ಶೆಟ್ಟಿ ಮಾತನಾಡಿ,ನವರಾತ್ರಿ ಉತ್ಸವದ ಅಂಗವಾಗಿ ಹತ್ತು ದಿನವೂ ಚಂಡಿಕಾ ಹೋಮ ನಡೆಯಲಿದ್ದು ಅನ್ನದಾನ ಸೇವೆ ಕೂಡ ನಡೆಯುತ್ತದೆ ಎಂದರು.
ಅಶೋಕ ಶೆಟ್ಟಿ ದೇವಲ್ಕುಂದ ಮಾತನಾಡಿ,ಗ್ರಾಮದಲ್ಲಿ ಯಾವುದೇ ರೀತಿಯ ದೇವತಾ ಕಾರ್ಯಗಳು ನಡೆಯಬೇಕಾದರೆ ಪ್ರಥಮವಾಗಿ ಮಹಿಷ ಮರ್ದಿನಿ ದೇವಿಯನ್ನು ಭಜಿಸಿಯೆ ಕಾರ್ಯವನ್ನು ಆರಂಭಿಸಲಾಗುತ್ತದೆ ಇದು ಇಲ್ಲಿನ ಮಹತ್ವವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರು,ಭಕ್ತರು,
ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

16 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago