ಉಡುಪಿ

ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವ ಶುಭಾರಂಭ

Share

ಕಾರ್ಕಳ:ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವದ ಅಂಗವಾಗಿ ಸ್ಪಾಟ್ ಬುಕ್ಕಿಂಗ್ ಆಫರ್,ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಖರೀದಿಸಬಹುದು.ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ಬುಕ್ಕಿಂಗ್ ಸೌಲಭ್ಯ ಇದೆ.
ಹಳೆ ವಾಹನ ಬದಲಾವಣೆಗೆ ಉತ್ತಮ ಬೆಲೆ ನೀಡಲಾಗುತ್ತದೆ.100% ಆನ್ ರೋಡ್ ಫಂಡಿಂಗ್,ಕಡಿಮೆ ನಗದು ಪಾವತಿ ಜೊತೆಗೆ 0 ಡೌನ್ ಪೇಮೆಂಟ್ ನಲ್ಲಿ ತಮ್ಮ ಕನಸಿನ ಕಾರ್ ಖರೀದಿಸಲು ಅವಕಾಶ ಇದೆ.ಹೈರೈಡರ್ ಕಾರ್ ಮತ್ತು ಫಾರ್ಚುನರ್ ಕಾರ್ ಮೇಲೆ ಒಂದು ಲಕ್ಷ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕೂಡ ಇದೆ.
ನವರಾತ್ರಿ ಶುಭ ಸಂದರ್ಭದಲ್ಲಿ ತಮ್ಮ ನೆಚ್ಚಿನ ಕಾರ್ ನ್ನು ಮನೆಗೆ ಕೊಂಡು ಹೋಗಲು ಯುನಿಟೆಡ್ ಟೊಯೊಟಾ ಸುವರ್ಣಾವಕಾಶವನ್ನು ತಮ್ಮ ಗ್ರಾಹಕರಿಗೆ ಒದಗಿಸಿ ಕೊಟ್ಟಿದೆ.
ಯುನಿಟೆಡ್ ಟೋಯೊಟ ಸೇಲ್ಸ್ ಆಫೀಸರ್ ಕಿಶೋರ್ ದೇವಾಡಿಗ ಮಾತನಾಡಿ,ಉಡುಪಿ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವವನ್ನು ಆರಂಭಿಸಲಾಗಿದ್ದು 0 ಪೇಮೆಂಟ್ ನಲ್ಲಿ ಕಾರ್ ಖರೀದಿಸ ಬಹುದಾಗಿದ್ದು, ಸ್ಥಳದಲ್ಲೇ ಬುಕಿಂಗ್ ಮಾಡುವ ಕಾರ್ ಗೆ ಆಕರ್ಷಕ ಬಡ್ಡಿದರದಲ್ಲಿ ಫೈನಾನ್ಸ್ ಸೌಲಭ್ಯ ಕೂಡ ಇದೆ.ತಮ್ಮ ಹಳೆ ಕಾರನ್ನು ಉತ್ತಮ ಬೆಲೆಗೆ ಮಾರಾಟ ಮಾಡಿ, ತಮ್ಮ ನೆಚ್ಚಿನ ಕಾರನ್ನು ಖರೀದಿಸಲು ಉತ್ತಮ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದರು.
ಮಾರ್ಕೆಟಿಂಗ್ ಆಫೀಸರ್ ಯಜ್ಞೇಶ್ ದೇವಾಡಿಗ ಮಾತನಾಡಿ,ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಮೇಳ ಒಂದು ವಾರಗಳ ಕಾಲ ಕಾರ್ಕಳದಲ್ಲಿ ನಡೆಯಲಿದೆ.ದಸರಾ ಉತ್ಸವದ ಅಂಗವಾಗಿ ಹೊಸ ಕಾರ್ ಖರೀದಿಸುವವರಿಗೆ ಮತ್ತು ಹಳೆ ಕಾರ್ ಎಕ್ಸೆಂಜ್ ಮಾಡುವವರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು.ಗ್ಲಾಂಜಾ ಕಾರ್ ಮೇಲೆ ಮತ್ತು ಪೊರ್ಚುನರ್ ಕಾರ್ ಮೇಲೆ ಒಂದು ಲಕ್ಷ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ನೀಡಲಾಗುತ್ತಿದೆ.ಸ್ಪಾಟ್ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಹತ್ತು ಸಾವಿರ ರೂಪಾಯಿ ವರೆಗೆ ಸ್ಪೇಷಲ್ ಡಿಸ್ಕೌಂಟ್ ಆಫರ್ ಕೂಡ ಇದೆ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭೇಟಿ.ಇವೊಂದು ಆಫರ್ ನ ಸೌಲಭ್ಯ ಪಡೆದುಕೊಳ್ಳಬೇಕೆಂದು ಕೇಳಿ ಕೊಂಡರು.
ಎಸ್.ಬಿ.ಐ ಬ್ಯಾಂಕ್ ಮೆನೇಜರ್ ಆನಂದ ಕುಮಾರ್ ಮಾತನಾಡಿ,ಟೊಯೋಟಾ ಕಂಪನಿ ಮತ್ತು ಎಸ್ ಬಿ ಐ ಬ್ಯಾಂಕ್ ವತಿಯಿಂದ ಕಾರ್ ಫೈನಾನ್ಸ್ ಮೇಳವನ್ನು ಆಯೋಜಿಸಲಾಗಿದೆ.ಇವೊಂದು ಕಾರ್ ಎಕ್ಸೆಂಜ್ ಮೇಳದಲ್ಲಿ ತಮ್ಮ ಯಾವುದೇ ಸಂಸ್ಥೆಯ ಕಾರನ್ನು ಉತ್ತಮ ಬೆಲೆಗೆ ಮಾರಾಟ ಮಾಡಿ, ಹೊಸ ಕಾರ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.ಯಾವುದೇ ರೀತಿಯ ಪೇಪರ್ ಚಾರ್ಜ್ ಇಲ್ಲದೆ ತಮ್ಮ ಮನಸಿಗೆ ಇಚ್ಛಿಸಿದ ಕಾರ್ ಕಡಿಮೆ ಬಡ್ಡಿ ದರದಲ್ಲಿ ಖರೀದಿಸಬಹುದಾಗಿದೆ.ಎಲ್ಲರಿಗೂ ಶುಭವಾಗಲಿ ಎಂದು ಶುಭಹಾರೈಸಿದರು.
ಗ್ರಾಹಕರಾದ ಡಿ .ಆರ್ ರಾಜು ಕಾರ್ಕಳ ಅವರು ಮಾತನಾಡಿ, ವಿಶ್ವದಲ್ಲಿ ಮತ್ತು ಭಾರತದಲ್ಲಿ ಸರಳ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಟೊಯೋಟಾ ಕಂಪನಿಯ ಹೊಸ ಮಾದರಿ ಕಾರ ಗಳನ್ನು ಕಾರ್ಕಳ ಜನರಿಗೆ ಪರಿಚಯಿಸುತ್ತಿರುವುದು ಬಹಳ ಸಂತೋಷದ ವಿಚಾರವಾಗಿದೆ.ಅದರ ಜೊತೆಯಲ್ಲಿ ಫೈನಾನ್ಸ್ ಸೌಲಭ್ಯ ಕೂಡ ಮಾಡಿ ಕೊಡುವುದರ ಮುಖೇನ ಇಲ್ಲಿನ ಜನರಿಗೆ ಅನುಕೂಲತೆಗಳನ್ನು ಮಾಡಿ ಕೊಟ್ಟಿರುವುದು ಗ್ರಾಹಕರಿಗೆ ಬಹಳಷ್ಟು ಪ್ರಯೋಜನವಾಗಿದೆ ಎಂದರು.
ವಿಶ್ವದಲ್ಲಿ ಭಾರತದಲ್ಲಿ ಜನರ ಮನ ಗೆದ್ದಿರುವ ಯುನಿಟೆಡ್ ಟೋಯೊಟ ಕಂಪನಿ ,ಕಾರ್ ಉದ್ಯಮದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.
ಈ ಸಂದರ್ಭದಲ್ಲಿ
ಪಿಡಬ್ಲ್ಯೂಡಿ ಕನ್ಸ್ಟ್ರಕ್ಷನ್ ಅರುಣ್ ಕುಮಾರ್ ಕಾರ್ಕಳ,ಅವಿನಾಶ್ ಜಿ, ಟೊಯೋಟಾ ಉಡುಪಿ ಸಿಬ್ಬಂದಿಗಳು ಊರಿನ ಗ್ರಾಮಸ್ಥರು ಗ್ರಾಹಕರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago