ಕುಂದಾಪುರ:ಬೈಂದೂರ ತಾಲೂಕಿನ ಕೆರ್ಗಾಲ್ ನಾಯ್ಕನಕಟ್ಟೆ ಬನಗಲ್ ಹಾಡಿ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ವಿಜಯದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.
ವೇದ ಮೂರ್ತಿ ಕೊರ್ಗಿ ನಾಗೇಶ್ವರ ಮಂಜರು ಮತ್ತು ರಾಘವೇಂದ್ರ ಕಾರಂತರ ಅವರ ಆಚಾರ್ಯತ್ವದಲ್ಲಿ
ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾಹೋಮ,ಮಹಾಮಂಗಳಾರತಿ,ಹಣ್ಣುಕಾಯಿ ಸೇವೆ,ಅನ್ನದಾನ ಸೇವೆ ಜರುಗಿತು.ಭಕ್ತಾದಿಗಳು,ಗ್ರಾಮಸ್ಥರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವಿಯ ಪ್ರಾಸದವನ್ನು ಸ್ವೀಕರಿಸಿದರು.
ಮಕ್ಕಳು,ಪುರುಷರು ಮತ್ತು ಮಹಿಳೆಯರಿಗಾಗಿ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಜನಾ ಕಾರ್ಯಕ್ರಮ ಜರುಗಿತು.
ದೇವಸ್ಥಾನದ ಅಧ್ಯಕ್ಷರಾದ ಉದ್ಯಮಿ ಸತೀಶ ಕೊಠಾರಿ ಮಾತನಾಡಿ,ದೇವಿಯ ಪ್ರತಿಷ್ಠಾಪನೆ ಮಾಡಿದ ದಿನಗಳಿಂದ ಗ್ರಾಮದಲ್ಲಿ ದೇವಿಯ ಚೈತನ್ಯ ಕಂಡು ಬಂದಿದ್ದು ಗ್ರಾಮಸ್ಥರಿಗೆ ದೇವಿಯ ಶ್ರೀರಕ್ಷೆ ದೊರಕಿದೆ. ಬಹಳಷ್ಟು ಕಾರಣಿಕ ಶಕ್ತಿಯನ್ನು ಹೊಂದಿರುವ ವನದುರ್ಗಾ ದೇವಿ ನಮ್ಮ ಗ್ರಾಮದಲ್ಲಿ ನೆಲೆ ನಿಂತಿರುವುದೆ ನಮ್ಮೆಲ್ಲರ ಸೌಭಾಗ್ಯ ಎಂದು ಹೇಳಿದರು.
ಅರ್ಚಕರಾದ ರಾಘವೇಂದ್ರ ಕಾರಂತ ಮಾತನಾಡಿ,ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.ತಾಯಿ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರು,ಸರ್ವ ಸದಸ್ಯರು,ಮಹಿಳಾ ಸೇವಾ ಸಮಿತಿ ಅಧ್ಯಕ್ಷರು,ಸದಸ್ಯರು,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ದೇವಸ್ಥಾನದ ಆಡಳಿತ ಮೊಕ್ತೇಸರರು,ಗೌರವ ಸಲಹೆಗಾರರು ಮತ್ತು ಎಲ್ಲಾ ಸದಸ್ಯರು,ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…