ಕುಂದಾಪುರ

ಕೆರ್ಗಾಲ್ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮೋತ್ಸವ

Share

ಕುಂದಾಪುರ:ಬೈಂದೂರ ತಾಲೂಕಿನ ಕೆರ್ಗಾಲ್ ನಾಯ್ಕನಕಟ್ಟೆ ಬನಗಲ್ ಹಾಡಿ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ವಿಜಯದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.
ವೇದ ಮೂರ್ತಿ ಕೊರ್ಗಿ ನಾಗೇಶ್ವರ ಮಂಜರು ಮತ್ತು ರಾಘವೇಂದ್ರ ಕಾರಂತರ ಅವರ ಆಚಾರ್ಯತ್ವದಲ್ಲಿ
ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾಹೋಮ,ಮಹಾಮಂಗಳಾರತಿ,ಹಣ್ಣುಕಾಯಿ ಸೇವೆ,ಅನ್ನದಾನ ಸೇವೆ ಜರುಗಿತು.ಭಕ್ತಾದಿಗಳು,ಗ್ರಾಮಸ್ಥರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವಿಯ ಪ್ರಾಸದವನ್ನು ಸ್ವೀಕರಿಸಿದರು.
ಮಕ್ಕಳು,ಪುರುಷರು ಮತ್ತು ಮಹಿಳೆಯರಿಗಾಗಿ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಜನಾ ಕಾರ್ಯಕ್ರಮ ಜರುಗಿತು.
ದೇವಸ್ಥಾನದ ಅಧ್ಯಕ್ಷರಾದ ಉದ್ಯಮಿ ಸತೀಶ ಕೊಠಾರಿ ಮಾತನಾಡಿ,ದೇವಿಯ ಪ್ರತಿಷ್ಠಾಪನೆ ಮಾಡಿದ ದಿನಗಳಿಂದ ಗ್ರಾಮದಲ್ಲಿ ದೇವಿಯ ಚೈತನ್ಯ ಕಂಡು ಬಂದಿದ್ದು ಗ್ರಾಮಸ್ಥರಿಗೆ ದೇವಿಯ ಶ್ರೀರಕ್ಷೆ ದೊರಕಿದೆ. ಬಹಳಷ್ಟು ಕಾರಣಿಕ ಶಕ್ತಿಯನ್ನು ಹೊಂದಿರುವ ವನದುರ್ಗಾ ದೇವಿ ನಮ್ಮ ಗ್ರಾಮದಲ್ಲಿ ನೆಲೆ ನಿಂತಿರುವುದೆ ನಮ್ಮೆಲ್ಲರ ಸೌಭಾಗ್ಯ ಎಂದು ಹೇಳಿದರು.
ಅರ್ಚಕರಾದ ರಾಘವೇಂದ್ರ ಕಾರಂತ ಮಾತನಾಡಿ,ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.ತಾಯಿ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರು,ಸರ್ವ ಸದಸ್ಯರು,ಮಹಿಳಾ ಸೇವಾ ಸಮಿತಿ ಅಧ್ಯಕ್ಷರು,ಸದಸ್ಯರು,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ದೇವಸ್ಥಾನದ ಆಡಳಿತ ಮೊಕ್ತೇಸರರು,ಗೌರವ ಸಲಹೆಗಾರರು ಮತ್ತು ಎಲ್ಲಾ ಸದಸ್ಯರು,ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago