ಕುಂದಾಪುರ

ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು,ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮ

Share

ಕುಂದಾಪುರ:ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜಯ ದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.
ವಿಜಯ ದಶಮಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾ ಹೋಮ ಮತ್ತು ವಿಶೇಷ ಪೂಜೆ.ಸಂಜೆ 5 ರಿಂದ ಶ್ರೀ ದೇವಿಯ ಕಲ್ಪೋಕ್ತ ಪೂಜೆ,ಸಹಸ್ರ ನಾಮಾರ್ಚನೆ,ಚಂಡಿಕಾ ಸಪ್ತಶತಿ ಪಾರಾಯಣ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ,ಅನ್ನದಾನ ಸೇವೆ ನಡೆಯಿತು.
ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಸೇವಾಕರ್ತರಾದ ಚಂದ್ರಶೇಖರ ಶೆಟ್ಟಿ ಮತ್ತು ನಾಗರತ್ನ ಹಾಗೂ ಜಯರಾಮ ಶೆಟ್ಟಿ ಕಾನ್ ಬೇರು ಅವರು ಶ್ರೀ ಮಹಿಷಮರ್ದಿನಿ ದೇವಿಗೆ ಚಂಡಿಕಾ ಹೋಮವನ್ನು ಸಲ್ಲಿಸಿದರು.
ಉದ್ಯಮಿಗಳಾದ ಚಂದ್ರಶೇಖರ್ ಶೆಟ್ಟಿ ಕಾನ್ ಬೇರು ಮಾತನಾಡಿ,ನಾವು ಆರಂಭಿಸುವ ಪ್ರತಿಯೊಂದು ಕೆಲಸದ ಮೊದಲು ತಾಯಿ ಮಹಿಷಮರ್ದಿನಿ ದೇವಿಯನ್ನು ನೆನೆದು ಕೊಂಡ ಮೇಲೆಯೇ ಮುಂದಿನ ಹೆಜ್ಜೆಯನ್ನು ಇಡುತ್ತೇವೆ.ಅಮ್ಮನವರನ್ನು ನಂಬಿದವರು ಹಾಳಾಗಿದ್ದ ಉದಾಹರಣೆಗಳೆ ಇಲ್ಲಾ.ಶಕ್ತಿ ಸ್ವರೂಪಿಣಿಯಾಗಿದ್ದಾಳೆ.ಶ್ರೀ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವ ಬಹಳಷ್ಟು ವಿಜೃಂಭಣೆಯಿಂದ ನಡೆದಿದೆ.ತಾಯಿ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.
ಸಮಿತಿ ಉಪಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಮಕ್ಕಿಮನೆ ಮಾತನಾಡಿ,ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಬಹಳಷ್ಟು ವಿಜೃಂಭಣೆಯಿಂದ ಸಂಪ್ರದಾಯ ಬದ್ಧವಾಗಿ ನಡೆದಿದೆ.ಶ್ರೀ ದೇವಿಗೆ ಭಕ್ತರು ಚೆಂಡಿಕಾಹೋಮ ಸಹಿತ ಅನ್ನದಾನ ಸೇವೆಯನ್ನು ಸಮರ್ಪಿಸಿದ್ದಾರೆ.ತಾಯಿ ಸೇವಾಕರ್ತರಿಗೂ, ಗ್ರಾಮಸ್ಥರಿಗೂ ಆಯುಷ್ಯ, ಆರೋಗ್ಯ ಸಂಪತ್ತನ್ನು ಕೊಟ್ಟು ಹರಸಲಿ ಎಂದು ಬೇಡಿಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು,ಭಕ್ತರು,
ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago