ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕರಾವಳಿ ಕರ್ನಾಟಕದಾದ್ಯಂತ ನವರಾತ್ರಿಯ ಉತ್ಸವವು ವಿಜ್ರಂಬಿಸುತ್ತಿದೆ ಮತ್ತು ಹುಲಿ ವೇಷ ಅಥವಾ ಹುಲಿ ನೃತ್ಯವು ಜನಮನ ಸೆಳೆಯುವ ಒಂದು ಸಾಂಸ್ಕೃತಿಕ ದೃಶ್ಯವಾಗಿದೆ. ಹುಲಿ ವೇಷ ಸಂಪ್ರದಾಯವು ಭಕ್ತಿಯಲ್ಲಿ ಆಳವಾಗಿ ಬೇರೂರಿದೆ.ಇದು ಪ್ರತಿಜ್ಞೆಯನ್ನು ಪೂರೈಸಲು ಅಥವಾ ದೈವಿಕ ರಕ್ಷಣೆಗಾಗಿ ದೇವಿಗೆ ಅರ್ಪಣೆಗಾಗಿ ಹುಟ್ಟಿಕೊಂಡಿದೆ ಎಂದು ನಂಬಲಾಗಿದೆ.ಇತ್ತೀಚಿನ ವರ್ಷಗಳಲ್ಲಿ ಈ ಪ್ರಾಚೀನ ಸಂಪ್ರದಾಯವು ತುಳುನಾಡು ಪ್ರದೇಶದಲ್ಲಿ ಸಾಂಸ್ಕೃತಿಕ ಹೆಮ್ಮೆಯ ಭವ್ಯ ಪ್ರದರ್ಶನವಾಗಿ ವಿಕಸನಗೊಂಡಿದೆ.
ಸಾಂಸ್ಕೃತಿಕ ಆಚರಣೆ,ಕಲೆ, ಸಂಸ್ಕಾರಕ್ಕೆ ಹೆಚ್ಚಿನ ಒತ್ತು ನೀಡುವ ಕುಂದಾಪುರದ ಸುಜ್ಞಾನ ಎಜುಕೇಶನ್ ಟ್ರಸ್ಟ್(ರಿ )ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಆಕರ್ಷಣೆಯಾಗಿ ಚೌಡೇಶ್ವರಿ ಹುಲಿ ವೇಷ ಕುಣಿತ ತಂಡ ಕುಂದಾಪುರ ಇವರಿಂದ ಸಾಂಸ್ಕೃತಿಕ ಹುಲಿ ವೇಷ ಕುಣಿತ ಪ್ರದರ್ಶನ ನಡೆಯಿತು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಹುಲಿವೇಷದೊಂದಿಗೆ ಹೆಜ್ಜೆ ಹಾಕಿದರು.ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ರಾಜ್ಯದ ವಿವಿಧ ಭಾಗದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಆಚರಣೆಯ ಜ್ಞಾನವನ್ನು ಒದಗಿಸುವ ನಿಟ್ಟಿನಲ್ಲಿ ಬಹಳ ವೈಭವದಿಂದ ಹುಲಿ ವೇಷ ಕುಣಿತದ ಆಯೋಜನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್.ಬಿ.ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಪ್ರದೀಪ್. ಕೆ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿಗಳು,ಪೋಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…