ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನವೆಂಬರ್.3 ರಂದು ನಾಡ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿರುವ ನಾಡ (ಪಡುಕೋಣೆ) ಶಾಖೆ ಪುನರ್ ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಮೊವಾಡಿ ಸೇತುವೆ ಮೇಲೆ ಭಿನ್ನ ರೀತಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.
ವಕೀಲರಾದ ಮಂಜುನಾಥ ಗಿಳಿಯಾರ್ ಅವರು ಆಮತಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ,ಸಂವಿಧಾನ ಬದ್ದ ಹಕ್ಕನ್ನು ಸಮುದಾಯ ಜನರಿಗೆ ಒದಗಿಸಿ ಕೊಡುವ ನಿಟ್ಟಿನಲ್ಲಿ ಹಾಗೂ ನೈತಿಕ ಶ್ಥೈರ್ಯ ತುಂಬುವ ದೃಷ್ಟಿಯಿಂದ ಜನಶಕ್ತಿ ಸಮಾವೇಶವನ್ನು ನಾಡದಲ್ಲಿ ಹಮ್ಮಿಕೊಳ್ಳಲಾಗಿದ್ದು.ಹೆಚ್ಚಿನ ಸಂಖ್ಯೆ ಸಮುದಾಯದ ಬಾಂಧವರು ಪಾಲ್ಗೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ ಹಕ್ಲಾಡಿ ಮಾತನಾಡಿ,ನಮ್ಮದೊಂದು ಪ್ರಮಾಣಿಕ ಮತ್ತು ನಿಷ್ಠಾವಂತ ಸಂಘಟನೆ ಆಗಿದೆ.ನೊಂದ ಜನರಿಗೆ ಹಾಗೂ ಅಶಕ್ತರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು.ಸಹಾಯ ಹಸ್ತವನ್ನು ಕೂಡ ಸಂಘಟನೆ ಮೂಲಕ ನೀಡಲಾಗುತ್ತಿದೆ ಎಂದರು.ಸಂಘಟನೆಗೆ ಶಕ್ತಿ ತುಂಬಲು ಸಮುದಾಯ ಬಾಂಧವರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ತಾಲೂಕು ಸಂಚಾಲಕ ಸತೀಶ ಕೆ ರಾಮನಗರ ಮಾತನಾಡಿ,ನಾಡ ಶಾಖೆ ಪುನರ್ ರಚನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನವೆಂಬರ್ 3 ರಂದು ನಾಡದಲ್ಲಿ ನಡೆಯಲಿದ್ದು,ಜನಶಕ್ತಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮುಖೇನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಸಂಘಟನಾ ಸಂಚಾಲಕ ರಮೇಶ, ,ಸಂಯೋಚಿತ ಸಂಚಾಲಕ ಪ್ರದೀಪ ಜಿ.ಪಿ,ಸಂಚಾಲಕ ಸುರೇಶ,ಪ್ರಶಾಂತ,ಕೃಷ್ಣ,ರಾಮಕೃಷ್ಣ,ರಾಘವೇಂದ್ರ ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…