ಕುಂದಾಪುರ

ನವೆಂಬರ್.3 ರಂದು ಜನಶಕ್ತಿ ಸಮಾವೇಶ ಆಮಂತ್ರಣ ಪತ್ರಿಕೆ ಬಿಡುಗಡೆ

Share

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನವೆಂಬರ್.3 ರಂದು ನಾಡ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿರುವ ನಾಡ (ಪಡುಕೋಣೆ) ಶಾಖೆ ಪುನರ್ ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಮೊವಾಡಿ ಸೇತುವೆ ಮೇಲೆ ಭಿನ್ನ ರೀತಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.
ವಕೀಲರಾದ ಮಂಜುನಾಥ ಗಿಳಿಯಾರ್ ಅವರು ಆಮತಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ,ಸಂವಿಧಾನ ಬದ್ದ ಹಕ್ಕನ್ನು ಸಮುದಾಯ ಜನರಿಗೆ ಒದಗಿಸಿ ಕೊಡುವ ನಿಟ್ಟಿನಲ್ಲಿ ಹಾಗೂ ನೈತಿಕ ಶ್ಥೈರ್ಯ ತುಂಬುವ ದೃಷ್ಟಿಯಿಂದ ಜನಶಕ್ತಿ ಸಮಾವೇಶವನ್ನು ನಾಡದಲ್ಲಿ ಹಮ್ಮಿಕೊಳ್ಳಲಾಗಿದ್ದು.ಹೆಚ್ಚಿನ ಸಂಖ್ಯೆ ಸಮುದಾಯದ ಬಾಂಧವರು ಪಾಲ್ಗೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ ಹಕ್ಲಾಡಿ ಮಾತನಾಡಿ,ನಮ್ಮದೊಂದು ಪ್ರಮಾಣಿಕ ಮತ್ತು ನಿಷ್ಠಾವಂತ ಸಂಘಟನೆ ಆಗಿದೆ.ನೊಂದ ಜನರಿಗೆ ಹಾಗೂ ಅಶಕ್ತರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು.ಸಹಾಯ ಹಸ್ತವನ್ನು ಕೂಡ ಸಂಘಟನೆ ಮೂಲಕ ನೀಡಲಾಗುತ್ತಿದೆ ಎಂದರು.ಸಂಘಟನೆಗೆ ಶಕ್ತಿ ತುಂಬಲು ಸಮುದಾಯ ಬಾಂಧವರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ತಾಲೂಕು ಸಂಚಾಲಕ ಸತೀಶ ಕೆ ರಾಮನಗರ ಮಾತನಾಡಿ,ನಾಡ ಶಾಖೆ ಪುನರ್ ರಚನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನವೆಂಬರ್ 3 ರಂದು ನಾಡದಲ್ಲಿ ನಡೆಯಲಿದ್ದು,ಜನಶಕ್ತಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮುಖೇನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಸಂಘಟನಾ ಸಂಚಾಲಕ ರಮೇಶ, ,ಸಂಯೋಚಿತ ಸಂಚಾಲಕ ಪ್ರದೀಪ ಜಿ.ಪಿ,ಸಂಚಾಲಕ ಸುರೇಶ,ಪ್ರಶಾಂತ,ಕೃಷ್ಣ,ರಾಮಕೃಷ್ಣ,ರಾಘವೇಂದ್ರ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago