ಕುಂದಾಪುರ

ಬಂಟರ ಯಾನೆ ನಾಡವರ ಸಂಘ ಬೈಂದೂರು 30 ಸಂಭ್ರಮ

Share

ಬೈಂದೂರು:ಬಂಟರ ಯಾನೆ ನಾಡವರ ಸಂಘ ಬೈಂದೂರು ಅದರ 30 ರ ಸಂಭ್ರಮ ಕಾರ್ಯಕ್ರಮ ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ಭಾನುವಾರ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಚಂಡೆವಾದನ ದೊಂದಿಗೆ ಬರಮಾಡಿಕೊಳ್ಳಲಾಯಿತು.ವಿವಿಧ ತಂಡಗಳಿಂದ ಭಜನಾ ಸ್ಪರ್ಧೆ ಕಾರ್ಯಕ್ರಮ ಜರುಗಿತು.ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ,ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಿಸಲಾಯಿತು.ಭಜನ ಸ್ಪರ್ಧೆಯಲ್ಲಿ ಸ್ಪರ್ಧಿಸಿದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.ಸಾಧಕರನ್ನು ಗೌರವಿಸಲಾಯಿತು.
ಶ್ರೀ ಮಹಾಲಿಂಗೇಶ್ವರ ದೇಸ್ಥಾನ ಬಸ್ರೂರು ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಸಂಘಗಳನ್ನು ರಚಿಸಿಕೊಳ್ಳುವುದರ ಮುಖೇನ ಸಮುದಾಯದ ಏಳಿಗೆಗೆ ಶ್ರಮಿಸುವ ಕೆಲಸವನ್ನು ಮಾಡಲಾಗುತ್ತಿದ್ದು.ಸಂಘದದಲ್ಲಿ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿದೆ.ಧೈರ್ಯದಿಂದ ಯುವಕರು ನಾನಾ ರಂಗಗಳಲ್ಲಿ ತೊಡಗಿಕೊಂಡಿದ್ದರ ಪರಿಣಾಮ ದಿಂದಾಗಿ ಉದ್ಯಮಿಗಳು,ಡಾಕ್ಟರ್ಸ್‍ಗಳು,ಇಂಜಿಯರ್ ಆಗಲು ಸಾಧ್ಯವಾಯಿತು.ಸರಕಾರಿ ಸವಲತ್ತುಗಳಿಗೆ ಮೊರೆ ಹೋಗದೆ ಸ್ವ ಸಾಮಥ್ರ್ಯದಿಂದ ಸವಲತ್ತುಗಳನ್ನು ಪಡೆದುಕೊಳ್ಳುವುದರ ಮುಖೇನ ಸಾಧಿಸಿ ತೋರಿಸಿದ್ದಾರೆ.ಬಂಟರ ಮೂಲ ಎನ್ನುವುದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾಗಿದೆ.ಬುದ್ದಿವಂತರ ಜಿಲ್ಲೆಯಲ್ಲಿ ಬೆಳೆದಂತಹ ನಾವು ಇಂದು ಎಲ್ಲಾ ರಂಗದಲ್ಲಿಯೂ ಮುಂಚೂಣಿಯಲ್ಲಿದ್ದೇವೆ.ಅಶಕ್ತರಿಗೆ ನೆರವು ನೀಡುವುದರ ಮುಖೇನ ಸಮಾಜದಲ್ಲಿನ ಹಿಂದುಳಿದ ವರ್ಗವನ್ನು ಮೇಲೆತ್ತುವ ಕೆಲಸವನ್ನು ಮಾಡಬೇಕು.ನಮ್ಮ ಒಗ್ಗಟ್ಟನ್ನು ಉಳಿಸಿಕೊಂಡು ಪರಸ್ಪರ ಭಾವನೆಯೊಂದಿಗೆ ಬದುಕಬೇಕು ಎಂದು ಹೇಳಿದರು.
ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದೆ ಅಧ್ಯಕ್ಷತೆ ವಹಿಸಿ ಮಾತನಾಡಿ,ಹಲವಾರು ಏಳು ಬೀಳುಗಳ ನಡುವೆ ಬಂಟರ ಯಾನೆ ನಾಡವರ ಸಂಘ ಬೈಂದೂರು ಇಂದು ಶಕ್ತಿಶಾಲಿ ಸಂಘವಾಗಿ ಬೆಳೆದು ನಿಂತ್ತಿದೆ.ಎಲ್ಲರ ಸಹಕಾರ ದಿಂದ 30 ರ ಸಂಭ್ರಮವನ್ನು ಅರ್ಥಪೂರ್ಣವಾಗಿ ನಡೆಸಲಾಗಿದೆ ಎಂದರು.
ಉದ್ಯಮಿ ಜಗದೀಶ ಶೆಟ್ಟಿ ಕುದ್ರುಕೋಡು ಮಾತನಾಡಿ,ನಮ್ಮ ದುಡಿಮೆಯ ಒಂದಂಶ ಹಣವನ್ನು ಸಂಘಕ್ಕೆ ವಿನಿಯೋಗ ಮಾಡುವುದರಿಂದ ಸಮಾಜದಲ್ಲಿನ ಅಶಕ್ತರ ಕುಟುಂಬಗಳಿಗೆ ನೆರವನ್ನು ನೀಡಲು ಸಹಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.
ಬಂಟರ ಸಂಘ ಬೆಂಗಳೂರು ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ,ನಿವೃತ್ತ ಪ್ರಿನ್ಸಿಪಾಲ್ ರಾಧಕೃಷ್ಣ ಶೆಟ್ಟಿ,ಬಂಟರ ಸಂಘ ಬೆಂಗಳೂರು ಚೇರ್‍ಮೆನ್ ವಿದ್ಯಾರ್ಥಿ ವೇತನ ಪ್ರಶಸ್ತಿ ಸಮಿತಿ ಉಮೇಶ್ ಕುಮಾರ್ ಶೆಟ್ಟಿ,ಬಂಟರ ಸಂಘ ಬೆಂಗಳೂರು ಗೌರವ ಕಾರ್ಯದರ್ಶಿ ವಿಜಯ ಶೆಟ್ಟಿ ಹಾಲಾಡಿ,ಉದ್ಯಮಿ ಜಯಶೀಲ ಶೆಟ್ಟಿ,ಮಂಜುನಾಥ ಶೆಟ್ಟಿ ಗಂಟಿಹೊಳೆ,ಸುಭಾಶ್ಚಂದ್ರ ಶೆಟ್ಟಿ ಸಾಲ್ಗದ್ದೆ,ಕೋಶಧಿಕಾರಿ ಜಯರಾಮ ಶೆಟ್ಟಿ,ಕಾರ್ಯದರ್ಶಿ ನಿತಿನ್ ಶೆಟ್ಟಿ,ಗೌರವಾಧ್ಯಕ್ಷ ವಾದಿರಾಜ ಶೆಟ್ಟಿ,ಚಿತ್ತೂರು ಮಂಜಯ್ಯ ಶೆಟ್ಟಿ ಉಪಸ್ಥಿತರಿದ್ದರು..ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದೆ ಸ್ವಾಗತಿಸಿದರು.ಚಂದ್ರಶೇಖರ ಶೆಟ್ಟಿ ನಿರೂಪಿಸಿದರು.ಜಯರಾಮ ಶೆಟ್ಟಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago