ಕುಂದಾಪುರ

ಸಾಮಾಜಿಕ ಕಳಕಳಿ ಮನೋಭಾವ ಹೊಂದಿರುವ ವ್ಯಕ್ತಿ ದಿ.ಎನ್.ಎ ಪೂಜಾರಿ ಅವರ ಕಾರ್ಯ ಸ್ಮರಣೀಯ

Share

Advertisement
Advertisement
Advertisement

ಬೈಂದೂರು:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರನ್ನು ಗಳಿಸಿರುವ ಹಿರಿಯರಾದ ದಿ.ನಾರಾಯಣ ಅನಂತ ಪೂಜಾರಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಕೆರ್ಗಾಲು ರಾಧಾಕೃಷ್ಣ ಸಭಾಭವನದಲ್ಲಿ ಭಾನುವಾರ ನಡೆಯಿತು.ದಿ.ನಾರಾಯಣ ಪೂಜಾರಿ ಅವರನ್ನು ಊರಿನ ಜನರು ಎನ್.ಎ ಪೂಜಾರಿ ಎಂದೆ ಕರೆಯುತ್ತಾರೆ.ಅತ್ಯಂತ ಕಡು ಬಡತನದಲ್ಲಿ ಹುಟ್ಟಿದ ಎನ್.ಎ ಪೂಜಾರಿ ಅವರು ಸ್ವಂತ ಪರಿಶ್ರಮದ ಮೂಲಕ ಮುಂಬೈನಲ್ಲಿ ರಾತ್ರಿ ಶಿಕ್ಷಣ ಪಡೆದು ಉದ್ಯೋಗಕ್ಕಾಗಿ ಸ್ನೇಹಿತರ ಜತೆಗೆ ವಿದೇಶಕ್ಕೆ ತೆರಳಿದ ಅವರು ಪೆಟ್ರೋಲಿಯಂ ಘಟಕದಲ್ಲಿ ಇಂಜಿನಿಯರ್ ಆಗಿ ಕೆಲಸವನ್ನು ಪಡೆದು ಜೀವನವನ್ನು ಕಟ್ಟಿಕೊಳ್ಳುವುದರ ಮೂಲಕ ಯಶಸ್ಸಿನ ಹಾದಿಯೊಂದಿಗೆ ಹೂಟ್ಟೂರಿಗೆ ಬಂದು ಹೊಟೇಲ್ ಉದ್ಯಮ ಆರಂಭಿಸಿ ಹಲವಾರು ಜನರಿಗೆ ಕೆಲಸವನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.ಎಂಟು ಭಾಷೆ ಪ್ರಾವಿಣ್ಯತೆಯನ್ನು ಹೊಂದಿರುವ ಎನ್.ಎ ಪೂಜಾರಿ ಅವರಿಗೆ ರಾಜಕೀಯ ನಂಟಿದೆ.ಕಲೆ ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಹೊಂದಿದ್ದಾರೆ.ಅವರ ಮಗ ಪ್ರಕಾಶ ಪೂಜಾರಿ ಅವರ ನೇತೃತ್ವದದಲ್ಲಿ ಎನ್,ಎ ಪೂಜಾರಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಅವರ ಹಿತೈಷಿಗಳೊಂದಿಗೆ ನಡೆದಿದೆ.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಾತನಾಡಿ,ಎನ್.ಎ ಪೂಜಾರಿ ಅವರು ಅಪ್ರತಿಮ ಹೋರಾಟಗಾರರಾಗಿದ್ದಾರೆ.ತಮ್ಮ ರಾಜಕೀಯ ಜೀವನದಲ್ಲಿ ಅಧಿಕಾರಿ ವರ್ಗದವರಿಗೆ ಗೌರವ ನೀಡುವ ಕೆಲಸವನ್ನು ಮಾಡುತ್ತಿದ್ದ ಅವರು.ತಮ್ಮ ಅಂತಿಮ ದಿನಗಳ ಸಂದರ್ಭದಲ್ಲಿಯೂ ಅಧಿಕಾರಿಗಳನ್ನು ಭೇಟಿ ಆರೋಗ್ಯ ವಿಚಾರಿಸಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ ಆಗಿದೆ.
ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಕ್ಷರಾದ ಬಾಬು ಹೆಗ್ಡೆ ಮಾತನಾಡಿ,ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿರುವ ಎನ್.ಎ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ನಿಕಟವರ್ತಿ ಆಗಿದ್ದಾರೆ.ಎನ್.ಎ ಪೂಜಾರಿ ಅವರ ವ್ಯಕ್ತಿತ್ವ ಮತ್ತು ಗುಣ ಯಾರಿಗೂ ಹೊಲಿಕೆ ಮಾಡಲು ಸಾಧ್ಯವಿಲ್ಲ ಎಂದರು.
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಎನ್.ಎ ಪೂಜಾರಿ ಅವರ ಓಡನಾಟದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ,ಎನ್.ಎ ಪೂಜಾರಿ ಮತ್ತು ಅವರ ರಾಜಕೀಯ ನಂಟು ಮತ್ತು ಸ್ಪರ್ಧೆ ಬಗ್ಗೆ ತಮ್ಮ ಮನದಾಳದ ಮಾತನ್ನು ಹೇಳಿದರು.ಈ ಸಂದರ್ಭದಲ್ಲಿ ಎನ್.ಎ ಪೂಜಾರಿ ಅವರ ಕುಟುಂಬಿಕರು,ಸ್ನೇಹಿತರು,ಹಿತೈಷಿಗಳು,ಬಂಧು ಮಿತ್ರರರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago