ಕುಂದಾಪುರ

ಸಾಮಾಜಿಕ ಕಳಕಳಿ ಮನೋಭಾವ ಹೊಂದಿರುವ ವ್ಯಕ್ತಿ ದಿ.ಎನ್.ಎ ಪೂಜಾರಿ ಅವರ ಕಾರ್ಯ ಸ್ಮರಣೀಯ

Share

ಬೈಂದೂರು:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರನ್ನು ಗಳಿಸಿರುವ ಹಿರಿಯರಾದ ದಿ.ನಾರಾಯಣ ಅನಂತ ಪೂಜಾರಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಕೆರ್ಗಾಲು ರಾಧಾಕೃಷ್ಣ ಸಭಾಭವನದಲ್ಲಿ ಭಾನುವಾರ ನಡೆಯಿತು.ದಿ.ನಾರಾಯಣ ಪೂಜಾರಿ ಅವರನ್ನು ಊರಿನ ಜನರು ಎನ್.ಎ ಪೂಜಾರಿ ಎಂದೆ ಕರೆಯುತ್ತಾರೆ.ಅತ್ಯಂತ ಕಡು ಬಡತನದಲ್ಲಿ ಹುಟ್ಟಿದ ಎನ್.ಎ ಪೂಜಾರಿ ಅವರು ಸ್ವಂತ ಪರಿಶ್ರಮದ ಮೂಲಕ ಮುಂಬೈನಲ್ಲಿ ರಾತ್ರಿ ಶಿಕ್ಷಣ ಪಡೆದು ಉದ್ಯೋಗಕ್ಕಾಗಿ ಸ್ನೇಹಿತರ ಜತೆಗೆ ವಿದೇಶಕ್ಕೆ ತೆರಳಿದ ಅವರು ಪೆಟ್ರೋಲಿಯಂ ಘಟಕದಲ್ಲಿ ಇಂಜಿನಿಯರ್ ಆಗಿ ಕೆಲಸವನ್ನು ಪಡೆದು ಜೀವನವನ್ನು ಕಟ್ಟಿಕೊಳ್ಳುವುದರ ಮೂಲಕ ಯಶಸ್ಸಿನ ಹಾದಿಯೊಂದಿಗೆ ಹೂಟ್ಟೂರಿಗೆ ಬಂದು ಹೊಟೇಲ್ ಉದ್ಯಮ ಆರಂಭಿಸಿ ಹಲವಾರು ಜನರಿಗೆ ಕೆಲಸವನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.ಎಂಟು ಭಾಷೆ ಪ್ರಾವಿಣ್ಯತೆಯನ್ನು ಹೊಂದಿರುವ ಎನ್.ಎ ಪೂಜಾರಿ ಅವರಿಗೆ ರಾಜಕೀಯ ನಂಟಿದೆ.ಕಲೆ ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಹೊಂದಿದ್ದಾರೆ.ಅವರ ಮಗ ಪ್ರಕಾಶ ಪೂಜಾರಿ ಅವರ ನೇತೃತ್ವದದಲ್ಲಿ ಎನ್,ಎ ಪೂಜಾರಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಅವರ ಹಿತೈಷಿಗಳೊಂದಿಗೆ ನಡೆದಿದೆ.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಾತನಾಡಿ,ಎನ್.ಎ ಪೂಜಾರಿ ಅವರು ಅಪ್ರತಿಮ ಹೋರಾಟಗಾರರಾಗಿದ್ದಾರೆ.ತಮ್ಮ ರಾಜಕೀಯ ಜೀವನದಲ್ಲಿ ಅಧಿಕಾರಿ ವರ್ಗದವರಿಗೆ ಗೌರವ ನೀಡುವ ಕೆಲಸವನ್ನು ಮಾಡುತ್ತಿದ್ದ ಅವರು.ತಮ್ಮ ಅಂತಿಮ ದಿನಗಳ ಸಂದರ್ಭದಲ್ಲಿಯೂ ಅಧಿಕಾರಿಗಳನ್ನು ಭೇಟಿ ಆರೋಗ್ಯ ವಿಚಾರಿಸಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ ಆಗಿದೆ.
ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಕ್ಷರಾದ ಬಾಬು ಹೆಗ್ಡೆ ಮಾತನಾಡಿ,ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿರುವ ಎನ್.ಎ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ನಿಕಟವರ್ತಿ ಆಗಿದ್ದಾರೆ.ಎನ್.ಎ ಪೂಜಾರಿ ಅವರ ವ್ಯಕ್ತಿತ್ವ ಮತ್ತು ಗುಣ ಯಾರಿಗೂ ಹೊಲಿಕೆ ಮಾಡಲು ಸಾಧ್ಯವಿಲ್ಲ ಎಂದರು.
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಎನ್.ಎ ಪೂಜಾರಿ ಅವರ ಓಡನಾಟದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ,ಎನ್.ಎ ಪೂಜಾರಿ ಮತ್ತು ಅವರ ರಾಜಕೀಯ ನಂಟು ಮತ್ತು ಸ್ಪರ್ಧೆ ಬಗ್ಗೆ ತಮ್ಮ ಮನದಾಳದ ಮಾತನ್ನು ಹೇಳಿದರು.ಈ ಸಂದರ್ಭದಲ್ಲಿ ಎನ್.ಎ ಪೂಜಾರಿ ಅವರ ಕುಟುಂಬಿಕರು,ಸ್ನೇಹಿತರು,ಹಿತೈಷಿಗಳು,ಬಂಧು ಮಿತ್ರರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago