ಕುಂದಾಪುರ

ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲದಿಂದ ತಾಲೂಕು ಕಚೇರಿಗೆ ಮುತ್ತಿಗೆ ಯತ್ನ

Share

ಕುಂದಾಪುರ:ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೋಷಣೆಯಿಂದ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ನಡೆಸಲಾಗುತ್ತಿದೆ. ವಕ್ಫ್ ನೋಟೀಸ್ ಮೂಲಕ ರೈತರಿಗೆ,ಸಾರ್ವಜನಿಕರಿಗೆ ಸಮಸ್ಯೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು.ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ರೈತರಿಗೆ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಬಹುಸಂಖ್ಯಾತರ ನೋವಿನ ಪರಿಣಾಮವನ್ನು ರಾಜ್ಯ ಸರಕಾರ ಎದುರಿಸಬೇಕಾಗುತ್ತದೆ ಎಂದರು.
ಕೇಂದ್ರ ಸರಕಾರ ಈಗಾಗಲೇ ವಕ್ಫ್ ತಿದ್ದುಪಡಿ ವಿಧೇಯಕ ಜಾರಿಗೆ ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದು ಮುಂದಿನ ಅಧಿವೇಶನದಲ್ಲಿ ಮಂಡನೆ ಯಾಗುವ ಸಾಧ್ಯತೆಯು ಇದೆ.ತಿದ್ದುಪಡಿ ಮಸೂದೆ ಜಾರಿಯಾದರೆ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.
ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ರೈತರ ಜಮೀನು ಕಬಾಲಿಕೆ ಸೇರಿದಂತೆ ಪ್ರಮುಖ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಅಧ್ಯಕ್ಷ ಬಿ. ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೈಂದೂರಿನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಬಟವಾಡಿ, ರೋಹಿತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಿಯದರ್ಶಿನಿ ಬೆಸ್ಕೂರು,ಮಹೇಂದ್ರ ಪೂಜಾರಿ,ಉಮೇಶ್ ಕಾಲ್ಗದ್ದೆ, ಶ್ಯಾಮಲ ಕುಂದರ್,ಶರತ್ ಶೆಟ್ಟಿ ಉಪ್ಪುಂದ, ಭಗೀರಥ ಸುರೇಶ್, ಅನಿತಾ ಕೆ. ಆರ್., ಡಾ. ಅತುಲ್ ಕುಮಾರ್ ಶೆಟ್ಟಿ, ಗಜೇಂದ್ರ ಸಹಿತವಾಗಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು ಅಪಾರ ಸಂಖ್ಯೆಯನ್ನು ಸೇರಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago