ಉಡುಪಿ

ಎಎನ್ ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ,ಮುಂದುವರಿದ ಕೂಂಬಿಂಗ್ ಕಾರ್ಯಾಚರಣೆ

Share

Advertisement
Advertisement
Advertisement

ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದ
ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.
ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.
ಹೆಬ್ರಿ ತಾಲೂಕಿನ ಪೀತ್‌ಬೈಲಿನಲ್ಲಿ ಎಎನ್‌ಎಫ್ ಅಧಿಕಾರಿಗಳು ಹಾಗೂ ನಕ್ಸಲ್‌‌ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ ವಿಕ್ರಂ ಗೌಡ ಎನ್‌ ಕೌಂಟರ್ ನಲ್ಲಿ ಹತರಾಗಿದ್ದಾರೆ.
ನಕಲ್ಸರ್ ಮತ್ತು ಪೋಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದ,ಈ ವೇಳೆ ನಡೆದ ಎನ್‌ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ.ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ಮಾಡಲಾಗಿತ್ತು.
ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ,ಕಬಿನಿ-2 ರ ಮುಖಂಡ ವಿಕ್ರಂ ಗೌಡ ಅಲಿಯಾಸ್ ಶ್ರೀಕಾಂತ್ ಗೌಡ (46) ಪೊಲೀಸರ ಗುಂಡೇಟಿಗೆ ಹತನಾಗಿದ್ದೇನೆ.
ಹೆಬ್ರಿಯಿಂದ ಸುಮಾರು 15 ಕಿ.ಮೀ. ದೂರದ ನಾಡ್ಪಾಲು ಗ್ರಾ.ಪಂ. ವ್ಯಾಪ್ತಿಯ ಪಿತ್‌ಬೈಲಿನ ದಟ್ಟ ಕಾನನದಲ್ಲಿ ಸೋಮವಾರ ರಾತ್ರಿ ನಡೆದ ಎಎನ್‌ಎಫ್ ಕಾರ್ಯಾಚರಣೆ ವೇಳೆ ಅರಣ್ಯದಲ್ಲಿ ಕೊನೆಯುಸಿರೆಳೆದ್ದಾರೆ‌.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago