ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ ನಿರ್ದೇಶಕರಾಗಿ,ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು.ಅವರಿಗೆ ಪತ್ನಿ,ಓರ್ವ ಪುತ್ರ,ಓರ್ವ ಪುತ್ರಿ ಇದ್ದಾರೆ.ಕಲಾವಿದನ ಅಕಾಲಿಕ ಮರಣಕ್ಕೆ ಯಕ್ಷರಂಗ ಸಂತಾಪವನ್ನು ಸೂಚಿಸಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…