ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ ನಿರ್ದೇಶಕರಾಗಿ,ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು.ಅವರಿಗೆ ಪತ್ನಿ,ಓರ್ವ ಪುತ್ರ,ಓರ್ವ ಪುತ್ರಿ ಇದ್ದಾರೆ.ಕಲಾವಿದನ ಅಕಾಲಿಕ ಮರಣಕ್ಕೆ ಯಕ್ಷರಂಗ ಸಂತಾಪವನ್ನು ಸೂಚಿಸಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…