ಕುಂದಾಪುರ

ಹವ್ಯಾಸಿ ಯಕ್ಷಗಾನ ಕಲಾವಿದ ರವೀಂದ್ರ ಆಚಾರ್ಯ ನಿಧನ

Share

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ ನಿರ್ದೇಶಕರಾಗಿ,ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು.ಅವರಿಗೆ ಪತ್ನಿ,ಓರ್ವ ಪುತ್ರ,ಓರ್ವ ಪುತ್ರಿ ಇದ್ದಾರೆ.ಕಲಾವಿದನ ಅಕಾಲಿಕ ಮರಣಕ್ಕೆ ಯಕ್ಷರಂಗ ಸಂತಾಪವನ್ನು ಸೂಚಿಸಿದೆ.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 hours ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

10 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago