ಕುಂದಾಪುರ

ಹವ್ಯಾಸಿ ಯಕ್ಷಗಾನ ಕಲಾವಿದ ರವೀಂದ್ರ ಆಚಾರ್ಯ ನಿಧನ

Share

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ ನಿರ್ದೇಶಕರಾಗಿ,ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು.ಅವರಿಗೆ ಪತ್ನಿ,ಓರ್ವ ಪುತ್ರ,ಓರ್ವ ಪುತ್ರಿ ಇದ್ದಾರೆ.ಕಲಾವಿದನ ಅಕಾಲಿಕ ಮರಣಕ್ಕೆ ಯಕ್ಷರಂಗ ಸಂತಾಪವನ್ನು ಸೂಚಿಸಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago